ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ
ಬಂಟ್ವಾಳ, ಆ. 20: ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಇದರ 30 ಲಕ್ಷ ರೂ. ಅನುದಾನದಲ್ಲಿ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ರಾಜ್ಯ ಅರಣ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ್ ಜೈನ್, ಬಂಟ್ವಾಳ ತಾಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಬಂಟ್ವಾಳ ತಾಲೂಕು ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಪ್ರೌಢ ಶಾಲೆಯ ಸ್ಥಾಪಕಾಧ್ಯಕ್ಷ ವೆಂಕಟರಮಣ ಐತಾಳ್, ಬೆಂಗಳೂರಿನ ಉದ್ಯಮಿ ವಿಠಲ್ ಶೆಟ್ಟಿ, ಮಣಿನಾಲ್ಕೂರು ಗ್ರಾಪಂ ಅಧ್ಯಕ್ಷೆ ಗೀತಾ ಶ್ರೀಧರ್ ಪೂಜಾರಿ, ಸದಸ್ಯ ಪಾರೂಕ್, ಸರಪಾಡಿ ಗ್ರಾಪಂ ಸದಸ್ಯ ದಯಾನಂದ ಶೆಟ್ಟಿ, ಸಹಾಯಕ ಇಂಜಿನಿಯರ್ ಪ್ರೀತಮ್, ಜ್ಯೂನಿಯರ್ ಇಂಜಿನಿಯರ್ ಗೋಪಾಲ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ಪೂವಪ್ಪ ಪೂಜಾರಿ ಸಹಿತ ಮೊದಲಾದವರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಬಾರ ಪ್ರಾಂಶುಪಾಲೆ ಶಾಲಿನಿ ಸ್ವಾಗತಿಸಿದರು. ಗ್ರಾಪಂ ಸದಸ್ಯ ಆದಂ ಕುಂಞಿ ವಂದಿಸಿದರು.