Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಲಿತ ಆತ್ಮಕತೆಗಳಲ್ಲಿ ಮಹಿಳೆಯ ಅನಾವರಣ...

ದಲಿತ ಆತ್ಮಕತೆಗಳಲ್ಲಿ ಮಹಿಳೆಯ ಅನಾವರಣ ಸಾಕಷ್ಟಿಲ್ಲ: ಅನಸೂಯಾ ಕಾಂಬ್ಳೆ

‘ದಲಿತ ಆತ್ಮಕತೆಗಳಲ್ಲಿ ಸ್ತ್ರೀ ಪ್ರತಿನಿಧೀಕರಣ’ ವಾಚನಾಭಿರುಚಿ ಕಮ್ಮಟ

ವಾರ್ತಾಭಾರತಿವಾರ್ತಾಭಾರತಿ29 Aug 2016 12:02 AM IST
share

ಮಂಗಳೂರು, ಆ.28: ದಲಿತರ ಆತ್ಮಕತೆಗಳಲ್ಲಿ ತಾಯ್ತನದ ಸೆಳೆತ ಇದೆಯಾದರೂ ದಲಿತ ಹೆಣ್ಣಿನ ಅನಾವರಣ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ ಎಂದು ಹಾವೇರಿಯ ಕವಿ, ಸಾಹಿತಿ ಅನಸೂಯಾ ಕಾಂಬ್ಳೆ ಅಭಿಪ್ರಾಯಿಸಿದ್ದಾರೆ. ರವಿವಾರ ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಸಾಹಿತ್ಯ ಸಮುದಾಯ, ಡಿವೈಎಫ್‌ಐಗಳ ಸಹಯೋಗದಲ್ಲಿ ‘ಕನ್ನಡ ಆತ್ಮಕತೆಗಳಲ್ಲಿ ದಲಿತ ಸಂವೇದನೆ’ ಎಂಬ ವಿಷಯದಲ್ಲಿ ಹಮ್ಮಿಕೊಂಡ ವಾಚನಾಭಿರುಚಿ ಕಮ್ಮಟದಲ್ಲಿ ‘ದಲಿತ ಆತ್ಮಕತೆಗಳಲ್ಲಿ ಸ್ತ್ರೀ ಪ್ರತಿನಿಧೀಕರಣ’ ಕುರಿತು ಅವರು ಮಾತನಾಡುತ್ತಿದ್ದರು. ಚರಿತ್ರೆಯಲ್ಲಿ ಕಳೆದುಹೋದವರು ಆತ್ಮ ಕಥನಗಳ ಮೂಲಕ ಮರು ಚರಿತ್ರೆ ನಿರ್ಮಾಣ ಮಾಡಿದ್ದಾರೆ. ಮರಾಠಿ ಭಾಷೆಯಲ್ಲಿ ದಲಿತ ಮಹಿಳೆಯರ ಆತ್ಮಕತೆಗಳನ್ನು ಅಚ್ಚುಕಟ್ಟಾಗಿ ಕಟ್ಟಿ ಕೊಡಲಾಗಿದೆ. ದಲಿತ ಮಹಿಳೆ ತನ್ನ ಮೇಲೆ ಅದೆಷ್ಟು ದೌರ್ಜನ್ಯಗಳಾದರೂ ಎದೆಗುಂದಿ ಆತ್ಮಹತ್ಯೆಯಂತಹ ದಾರಿ ತುಳಿಯದೆ ಅದರ ವಿರುದ್ಧ ಸೆಟೆದು ತನ್ನ ಬದುಕನ್ನು ರೂಪಿಸಬಲ್ಲಳು ಎಂಬುದು ಅನೇಕ ಆತ್ಮಕತೆಗಳಲ್ಲಿ ನಿರೂಪಿತವಾಗಿವೆ ಎಂದು ಅವರು ಹೇಳಿದರು. ದಲಿತ ಆತ್ಮಕತೆಗಳಲ್ಲಿ ಸಮಾಜದ ಭಾಗವಾದ ದಲಿತ ಮಹಿಳೆಯನ್ನು ನಿರೀಕ್ಷಿತ ಮಟ್ಟದಲ್ಲಿ ಪ್ರತಿನಿಧೀಕರಿಸಲು ಸಾಧ್ಯವಾಗಿಲ್ಲ. ಹೊಸ ಚರಿತ್ರೆಯ ಶೋಧದೊಂದಿಗೆ ಪೂರ್ಣ ಪ್ರಮಾಣದಲ್ಲಿ ದಲಿತ ಮಹಿಳೆಯ ಅನಾವರಣ ಆತ್ಮಕತೆಗಳ ಮೂಲಕ ಮುಂದಿನ ದಿನಗಳಲ್ಲಾದರೂ ಹೊರಬರುವ ನಿರೀಕ್ಷೆ ಇದೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ಸಹ ಮಾತುಗಳನ್ನಾಡಿದ ಸಾಹಿತಿ ಬಿ.ಎಂ. ರೋಹಿಣಿ, ದಲಿತ ಮಹಿಳೆಯಲ್ಲಿ ನೋವು, ತುಮುಲಗಳು ಸಾಕಷ್ಟಿವೆ. ಅದು ಹೊರಗೆ ಬರಬೇಕಿದೆ. ಸಿಡಿದು ಪ್ರತಿಭಟಿಸುವ ನಿಟ್ಟಿನಲ್ಲಿ, ಸಮಾಜದ ಎದುರು ತನ್ನ ಸ್ವಾಭಿಮಾನ ಪ್ರದರ್ಶನದ ನಿಟ್ಟಿನಲ್ಲಿ ಆಕೆಯಲ್ಲಿನ ಗೊಂದಲ ನಿವಾರಣೆಯಲ್ಲಿ ಆಕೆಗೆ ಧೈರ್ಯ ತುಂಬುವ ಕೆಲಸ ಆಗಬೇಕಾಗಿದೆ ಎಂದರು. ಇದೇ ವೇಳೆ ಉಪನ್ಯಾಸಕಿ ಜ್ಯೋತಿ ಚೇಳ್ಯಾರು ಮಾತುಗಳನ್ನಾಡಿದರು. ಗೋಷ್ಠಿಯಲ್ಲಿ ವಾಚನಾಭಿರುಚಿ ಕಮ್ಮಟದ ನಿರ್ದೇಶಕ ಡಾ. ವಿಠಲ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಸಹಾಯಕ ಪ್ರೊ.ಸಬಿತಾ ಗುಂಡ್ಮಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X