ಎಸಿಬಿಯಿಂದ ಅಹವಾಲು ಸ್ವೀಕಾರ
ಸುಳ್ಯ, ಆ.30: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸುಳ್ಯದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ದರು. ಈ ಸಂದರ್ಭ ಡಿವೈಎಸ್ಪಿ ಸುಧೀರ್ ಹೆಗ್ಡೆ ಮಾತನಾಡಿ, ಮಂಗಳೂರಿನಲ್ಲಿರುವ ಕಚೇರಿಯಲ್ಲೂ ಸಾರ್ವಜನಿಕರು ದೂರು ನೀಡಬಹುದು. ಪ್ರತಿ ತಿಂಗಳ ನಿಗದಿತ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲಿ ಅಹ ವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದ ಪ್ರಕರಣಗಳಿ ದ್ದರೂ ಸಾರ್ವಜನಿಕರು ದೂರು ನೀಡಬಹುದು. ಮಾಹಿತಿಗೆ ದೂ.ಸಂ.:0824-2483000 ಸಂಪರ್ಕಿಸಬಹುದು ಎಂದು ತಿಳಿಸಿದರು.
Next Story