ಮಲಬಾರ್ ಗೋಲ್ಡ್ನಲ್ಲಿ ಶಿಕ್ಷಕರಿಗೆ ಸನ್ಮಾನ
ಉಡುಪಿ, ಸೆ.6: ಉಡುಪಿಯ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.
ಹಿರಿಯಡ್ಕ ಸರಕಾರಿ ಪಿಯು ಕಾಲೇಜಿನ ನಿವೃತ್ತ ಉಪನ್ಯಾಸಕಿ ಎನ್.ರಮಾ ಶೆಟ್ಟಿ, ಉಡುಪಿ ಬೋರ್ಡ್ ಹೈಸ್ಕೂಲಿನ ಪ್ರಾಂಶುಪಾಲ ರಮೇಶ್ ಅಡಿಗ, ಮಣಿಪಾಲ ಮಾಧವ ಕೃಪಾ ಶಾಲೆಯ ಮುಖ್ಯ ಶಿಕ್ಷಕಿ ಉಮಾ ರಾವ್, ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಗದೀಶ್ ಶೆಟ್ಟಿ, ಆಶಾ ನಿಲಯ ವಿಶೇಷ ಮಕ್ಕಳ ಶಾಲೆಯ ಮುಖ್ಯ ಶಿಕ್ಷಕಿ ಅಗ್ನೇಸ್ ಹೇಮಾ ವತಿ, ಶಿರ್ವ ಸೈಂಟ್ ಮೇರಿಸ್ ಪಿಯು ಕಾಲೇಜಿನ ಪ್ರಾಂಶುಪಾಲೆ ಐರಿನ್ ಮೆಂಡೋನ್ಸ, ಬ್ರಹ್ಮಾವರ ಲಿಟ್ಲ್ರಾಕ್ ಪಿಯು ಕಾಲೇಜಿನ ಉಪನ್ಯಾಸಕಿ ಜ್ಯೋತಿ, ಉಡುಪಿ ಮುಕುಂದಾ ಕೃಪಾ ಶಾಲೆಯ ಮುಖ್ಯ ಶಿಕ್ಷಕಿ ಮುಕ್ತ ಶೆಣೈ, ಉಡುಪಿ ಸ್ನೇಹಾ ಟುಟೋರಿಯಲ್ನ ಪ್ರಾಂಶುಪಾಲ ಉಮೇಶ್ ನಾಯಕ್ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ನಗರಸಭೆ ಪೌರಾಯುಕ್ತ ಡಿ.ಮಂಜುನಾಥಯ್ಯ ಮಾತನಾಡಿ, ಇಂದಿನ ಆಧುನಿಕ ಜಗತ್ತಿನಲ್ಲಿ ಮಕ್ಕಳಿಗೆ ಆಧುನಿಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಕರು ತಮ್ಮನ್ನು ತಾವು ಬದಲಾಯಿಸಿ ಕೊಳ್ಳಬೇಕು. ಬದಲಾವಣೆಗೆ ತಕ್ಕ ರೀತಿಯಲ್ಲಿ ಪರಿವರ್ತನೆಯಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ತೆಂಕಪೇಟೆ ವಾರ್ಡಿನ ಸದಸ್ಯ ಶ್ಯಾಮ್ಪ್ರಸಾದ್ ಕುಡ್ವ, ಮಲಬಾರ್ ಗೋಲ್ಡ್ನ ಸ್ಟೋರ್ ಹೆಡ್ ಹಫೀಝ್ ರೆಹಮಾನ್, ಸಹಾಯಕ ಸ್ಟೋರ್ ಹೆಡ್ ಹೇಮಂತ್ ಉಪಸ್ಥಿತ ರಿದ್ದರು. ಕಿರಣ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.30ರವರೆಗೆ ಶಿಕ್ಷಕರಿಗೆ ಚಿನ್ನದ ಮೇಕಿಂಗ್ ಚಾರ್ಜ್ ಮೇಲೆ ಶೇ.30 ಹಾಗೂ ಡೈಮಂಡ್ನ ಮೇಕಿಂಗ್ ಚಾರ್ಜ್ ಮೇಲೆ ಶೇ.50ರಷ್ಟು ರಿಯಾಯಿತಿ ನೀಡಲಾಗುತ್ತಿದೆ.