ಬಕ್ರೀದ್ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆಗೆ ಆಗ್ರಹಿಸಿ ಮನವಿ
ಮಂಗಳೂರು, ಸೆ. 11: ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮತ್ತು ಸೂಕ್ತ ಭದ್ರತೆ ಕಲ್ಪಿಸುವಂತೆ ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುರತ್ಕಲ್ ವಲಯ ಸಮಿತಿ ವತಿಯಿಂದ ಶನಿವಾರ ಸುರತ್ಕಲ್ ಠಾಣಾಧಿಕಾರಿ ಚೆಲುವರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.
ಸುರತ್ಕಲ್ ವಲಯಾಧ್ಯಕ್ಷ ಅಬ್ದುಲ್ ಖಾದರ್, ಕಾರ್ಯದರ್ಶಿ ತೌಫೀಕ್ ಸುರತ್ಕಲ್, ಸಮಿತಿ ಸದಸ್ಯ ಇಸ್ಮಾಯೀಲ್, ಸುರತ್ಕಲ್ ಏರಿಯಾ ಅಧ್ಯಕ್ಷ ನವಾಝ್ ಸುರತ್ಕಲ್ ಉಪಸ್ಥಿತರಿದ್ದರು.
Next Story