ಬೇಕಲ್ ಉಸ್ತಾದರಿಂದ ‘ಅಸ್ಸುಫ್ಫ’ ಯೋಜನೆಯ ಉದ್ಘಾಟನೆ
ಮಂಗಳೂರು, ಅ. 6: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ವತಿಯಿಂದ ರಾಜ್ಯ ಮಟ್ಟದ ‘ಅಸ್ಸುಫ್ಫ’ ಯೋಜನೆಯ ಉದ್ಘಾಟನಾ ಸಮಾರಂಭ ಗುರುವಾರ ನಗರದ ಪುರಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ರಾಜ್ಯ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಬೇಕಲ್ ಇಬ್ರಾಹೀಂ ಮುಸ್ಲಿಯಾರ್, ಪ್ರಸ್ತುತ ಯೋಜನೆಯು ಎಸ್ಸೆಸ್ಸೆಫ್ ಕಾರ್ಯಕರ್ತರಿಗೆ ಧಾರ್ಮಿಕ ಚೌಕಟ್ಟಿನಡಿ ಆಧ್ಯಾತ್ಮಿಕ ಚಿಂತನೆಯನ್ನು ಮೂಡಿಸುವ ವಿಶೇಷ ಕಾರ್ಯಕ್ರಮವಾಗಿದೆ. ಧಾರ್ಮಿಕ ಜ್ಞಾನದಿಂದ ಕೆಡುಕನ್ನು ದೂರ ಮಾಡಲು ಸಾಧ್ಯವಿದೆ. ಆದ್ದರಿಂದ ಯುವಕರು ಧಾರ್ಮಿಕ ಜ್ಞಾನವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಮೌಲಾನ ಪೇರೋಡ್ ಅಬ್ದುಲ್ ರೆಹ್ಮಾನ್ ಸಖಾಫಿ ಕುಟ್ಯಾಡಿ, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಎನ್.ಕೆ.ಎಂ. ಶಾಫಿ ಸಅದಿ ಅಧ್ಯಕ್ಷತೆ ವಹಿಸಿದ್ದರು.
ಕೆಸಿಎಫ್ ಅಂತಾರಾಷ್ಟ್ರೀಯ ಅಧ್ಯಕ್ಷ ಎಸ್.ಪಿ. ಹಂಝ ಸಖಾಫಿ, ಎಸ್ವೈಎಸ್ ರಾಜ್ಯ ಕಾರ್ಯದರ್ಶಿ ಎಂ.ಎಸ್.ಎಂ ಅಬ್ದುಲ್ ರಶೀದ್ ಝೈನಿ ಕಾಮಿಲ್, ದಕ್ಷಿಣ ಜಿಲ್ಲಾ ಜಂಇಯತುಲ್ ಉಲಮಾ ಅಧ್ಯಕ್ಷ ಮುಹಮ್ಮದ್ ಅಲಿ ಫೈಝಿ, ಪ್ರಧಾನ ಕಾರ್ಯದರ್ಶಿ ಮುಹಿಯುದ್ದೀನ್ ಕಾಮಿಲ್ ಸಖಾಫಿ ತೋಕೆ, ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹೀಂ ಸಅದಿ, ಎಸ್ವೈಎಸ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಸಖಾಫಿ ಮೂಳೂರು, ಎಸ್ಇಡಿಸಿ ಅಧ್ಯಕ್ಷ ಕೆ.ಕೆ.ಎಂ.ಕಾಮಿಲ್, ಎಸ್ಜೆಎಂ ರಾಜ್ಯಾಧ್ಯಕ್ಷ ಆತೂರು ಸಅದ್ ಮುಸ್ಲಿಯಾರ್, ಎಸ್ವೈಎಸ್ ಜಿಲ್ಲಾ ಉಪಾಧ್ಯಕ್ಷ ಮುಹಮ್ಮದ್ ಅಲಿ ಸಖಾಫಿ, ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಅಬ್ದುಸ್ಸಲಾಂ ಚೆನ್ನಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಬಿ.ಎಂ. ಸಾದಿಕ್ ಮಲೆಬೆಟ್ಟು, ಉಪಸ್ಥಿತರಿದ್ದರು.