ನಾಳೆ ‘ಮೇಲ್ತೆನೆ’ಯಿಂದಬ್ಯಾರಿ ಸಾಹಿತ್ಯ ಕೂಟ
ಮಂಗಳೂರು, ಅ.8: ದೇರಳಕಟ್ಟೆಯ ಮೇಲ್ತೆನೆ (ಬ್ಯಾರಿ ಎಲ್ತ್ಕಾರ್ ಪಿನ್ನೆ ಕಲಾವಿದಮ್ಮಾರ್ರೊ ಕೂಟ) ಇದರ ವತಿಯಿಂದ ಬ್ಯಾರಿ ಭಾಷಾ ದಿನಾಚರಣೆಯ ಅಂಗವಾಗಿ ಹರೇಕಳ ನ್ಯೂಪಡ್ಪು ಸರಕಾರಿ ಪ್ರೌಢಶಾಲೆಯಲ್ಲಿ ಅ.10ರಂದು ಅಪರಾಹ್ನ 2ಕ್ಕೆ ಬ್ಯಾರಿ ಸಾಹಿತ್ಯ ಕೂಟ ನಡೆಯಲಿದೆ.
ಶಾಲೆಯ ಎಸ್ಡಿಎಂಸಿ ಕಾರ್ಯಾಧ್ಯಕ್ಷ ಹರೇಕಳ ಹಾಜಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೇಲ್ತೆನೆ ಅಧ್ಯಕ್ಷ ಆಲಿಕುಂಞಿ ಪಾರೆ ಅಧ್ಯಕ್ಷತೆ ವಹಿಸುವರು. ವಿದ್ಯಾರ್ಥಿಗಳಿಗೆ ಬ್ಯಾರಿ ಭಾಷೆ ಓದುವ ಮತ್ತು ಬ್ಯಾರಿ ಕ್ವಿಝ್ ಸ್ಪರ್ಧೆ ಹಾಗೂ ಕವಿ, ಗಾಯಕ ಬಶೀರ್ ಅಹ್ಮದ್ ಕಿನ್ಯ ಅಧ್ಯಕ್ಷತೆಯಲ್ಲಿ ಬ್ಯಾರಿ ಕವಿಗೋಷ್ಠಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story