ಜ.4ರಂದು ಜನಪಕ್ಷ ಯಾತ್ರೆ
ಕಾಸರಗೋಡು, ಜ.1: ಕೋಮುವಾದ, ಅಸಹಿಷ್ಣುತೆ ಹಾಗೂ ಕೇಂದ್ರ ಸರಕಾರದ ಕೃಷಿ, ಜನವಿರೋಧಿ ನೀತಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ವಿ.ಎಂ.ಸುಧೀರನ್ ನೇತೃತ್ವದಲ್ಲಿ ‘ಜನಪಕ್ಷ ಯಾತ್ರೆ’ ಜ.4ರಂದು ಕುಂಬಳೆಯಿಂದ ಪ್ರಯಾಣ ಬೆಳೆಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಕೆ.ಶ್ರೀಧರನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಜೆ 4 ಗಂಟೆಗೆ ಕುಂಬಳೆಯಲ್ಲಿ ನಡೆಯುವ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಯಾತ್ರೆಗೆ ಚಾಲನೆ ನೀಡುವರು. ಗೃಹಸಚಿವ ರಮೇಶ್ ಚೆನ್ನಿತ್ತಲ ಅಧ್ಯಕ್ಷತೆ ವಹಿಸು ವರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಮಾತ ನಾಡಲಿರುವರು. ಫೆ.9ರಂದು ತಿರುವನಂತಪುರದಲ್ಲಿ ಯಾತ್ರೆ ಸಮಾಪನಗೊಳ್ಳಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪಾದೂರು ಕುನ್ಚಾಮು, ನ್ಯಾಯವಾದಿ ಗೋವಿಂದನ್ ನಾಯರ್, ಪಿ.ಎ. ಸುರೇಶ್, ಹಕೀಮ್ ಕುನ್ನಿಲ್, ವಿನೋದ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Next Story