ಕುತ್ತಾರು: ಆರೆಸ್ಸೆಸ್ ಮುಖಂಡನ ಕೊಲೆಗೆ ಯತ್ನ
ಮಂಗಳೂರು, ನ.10: ಯುವಕನೋರ್ವನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿ ಕೊಲೆ ಯತ್ನಿಸಿರುವ ಘಟನೆ ಇಂದು ಮಜಲುತೋಟ ಸ್ಮಶಾನದ ಬಳಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಕುತ್ತಾರಿನ ನಿವಾಸಿ ರಾಮ್ಮೋಹನ್ (38) ಎಂದು ಗುರುತಿಸಲಾಗಿದೆ. ಇವರು ಆರೆಸ್ಸೆಸ್ ಕಾರ್ಯಕರ್ತನೆಂದು ಹೇಳಲಾಗಿದೆ.
ಮಜಲುತೋಟದ ಸ್ಮಶಾನದ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ರಾಮ್ ಮೋಹನ್ರ ಮೇಲೆ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ಇಬ್ಬರು ತಲವಾರು ಬೀಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪರಿಣಾಮವಾಗಿ ರಾಮ್ಮೋಹನ್ರ ಕುತ್ತಿಗೆ ಹಾಗೂ ತಲೆಯ ಭಾಗಗಳಿಗೆ ರಕ್ತಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story