ಕಮಿಷನರ್ ನೇತೃತ್ವದಲ್ಲಿ ತನಿಖೆ: ಖಾದರ್
ವಿಚಾರಣಾಧೀನ ಕೈದಿಯ ಹತ್ಯೆ ಪ್ರಕರಣ
ಮಂಗಳೂರು, ನ.11: ಮೈಸೂರಿನ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ ಮುಸ್ತಫ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ ಈ ಸಂಬಂಧ ತನಿಖೆಗೆ ಆದೇಶ ನೀಡಿರುವುದಾಗಿ ಆಹಾರ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಜೈಲಿನಲ್ಲಿ ವಿಚಾರಣಾಧೀನ ಕೈದಿಯ ಹತ್ಯೆಯು ಎರಡನೆ ಘಟನೆಯಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂಬ ಖಾದರ್ ಅವರ ಮನವಿಗೆ ಸ್ಪಂದಿಸಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಈ ಬಗ್ಗೆ ಮೈಸೂರು ಪೊಲೀಸ್ ಆಯುಕ್ತ ಸುಬ್ರಮಣ್ಯೇಶ್ವರ ರಾವ್ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
Next Story