Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿಗಳಿಗೆ ಜೋಗತಿ ನೃತ್ಯ ತರಬೇತಿ...

ವಿದ್ಯಾರ್ಥಿಗಳಿಗೆ ಜೋಗತಿ ನೃತ್ಯ ತರಬೇತಿ ನೀಡಿ: ಮಂಜಮ್ಮ ಜೋಗತಿ

ವಾರ್ತಾಭಾರತಿವಾರ್ತಾಭಾರತಿ14 Nov 2016 9:38 PM IST
share
ವಿದ್ಯಾರ್ಥಿಗಳಿಗೆ ಜೋಗತಿ ನೃತ್ಯ ತರಬೇತಿ ನೀಡಿ: ಮಂಜಮ್ಮ ಜೋಗತಿ

ಉಡುಪಿ, ನ.14: ಜೋಗತಿ ನೃತ್ಯವನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಅನುಭವಸ್ಥ ಜೋಗತಿ ನೃತ್ಯ ಕಲಾವಿದರುಗಳಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಬೇಕಾಗಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜೋಗತಿ ನೃತ್ಯ ಕಲಾವಿದೆ ಮಂಜಮ್ಮ ಜೋಗತಿ ಹೇಳಿದ್ದಾರೆ.

ಮಣಿಪಾಲ ವಿಶ್ವವಿದ್ಯಾಲಯ ಡಾ.ಟಿ.ಎಂ.ಎ.ಪೈ ಭಾರತೀಯ ಸಾಹಿತ್ಯ ಪೀಠವು ಉಡುಪಿ ರಥಬೀದಿ ಗೆಳೆಯರು ಸಹಯೋಗದೊಂದಿಗೆ ಸೋಮ ವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿದ ಮಾತಾ ಮಂಜಮ್ಮ ಜೋಗತಿ ಮತ್ತು ತಂಡದಿಂದ ಜೋಗತಿ ನೃತ್ಯ-ಆತ್ಮಕಥೆ-ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಕೇವಲ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡುವುದರಿಂದ ಯಾವುದೇ ಕಲಾ ಪ್ರಕಾರಗಳನ್ನು ಉಳಿಸಲು ಸಾಧ್ಯವಿಲ್ಲ. ಅದು ಶಾಲಾ ಕಾಲೇಜು ಮಕ್ಕಳಿಗೆ ತರಬೇತಿ ನೀಡುವುದರಿಂದ ಆ ಕಾರ್ಯ ಮಾಡಲು ಸಾಧ್ಯ. ಸರಕಾರ ಕಲಾವಿದರುಗಳಿಗೆ ನೀಡುವ ಮಾಸಾಶನಕ್ಕೆ ವರ್ಷದ ಮಿತಿಯನ್ನು ತೆಗೆಯ ಬೇಕು ಮತ್ತು ವಸತಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅವರು ತಿಳಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಮಂಜುನಾಥ ಶೆಟ್ಟಿಯಾಗಿ ಹುಟ್ಟಿದ ನಾನು ಬೆಳೆಯುತ್ತ ಒಳಗಿನ ಹೆಣ್ಣಿನ ಭಾವನೆ ನನ್ನನ್ನು ತುಂಬಾ ಕಾಡುತಿತ್ತು. ಹೀಗಾಗಿ ನಾನು ಹೆಣ್ಣಾಗಿ ಪರಿವರ್ತನೆ ಹೊಂದಿದೆ. ಆಗ ನಾನು ತಂದೆ ತಾಯಿ ಮನೆಯವ ರಿಂದ ತೀರಾ ಶೋಷಣೆಗೆ ಒಳಗಾಗಿ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಬದುಕಿದೆ. ತಂದೆ ನನ್ನ ಮನೆಯಿಂದ ಹೊರ ಹಾಕಿದರು. ಮುಂದೆ ಸಮಾಜ ನನ್ನನ್ನು ತಾತ್ಸರ ಭಾವದಿಂದ ನೋಡಿತು. ಅಲ್ಲಿಯೂ ಸಾಕಷ್ಟು ಶೋಷಣೆಗೆ ಒಳಗಾದೆ. ಬಳಿಕ ಜೋಗತಿ ನೃತ್ಯ ತಂಡದೊಂದಿಗೆ ಸೇರಿ ಕಲಾವಿದೆಯಾದೆ. ಈಗ ನನ್ನಲ್ಲಿ ಹಣ ಇಲ್ಲದಿದ್ದರೂ ಹೆಸರು ಇದೆ. ಹಾಗಾಗಿ ಈಗ ಎಲ್ಲರೂ ನನ್ನ ಹತ್ತಿರ ಮಾಡಿಕೊಂಡಿದ್ದಾರೆ ಎಂದು ಅವರು ತಮ್ಮ ಆತ್ಮಕಥೆಯನ್ನು ಕಣ್ಣೀರಿಡುತ್ತ ಹೇಳಿದರು.

ಜೋಗತಿ ಪರಂಪರೆ ಕುರಿತು ಸಂಶೋಧಕ ಡಾ.ಅರುಣ ಜೋಳದ ಕೂಡ್ಲಿಗಿ ಉಪನ್ಯಾಸ ನೀಡಿ, ಜೋಗತಿ ಎಂಬುದು ನಾಥ ಪಂಥದಿಂದ ಶಕ್ತಿಯ ಆರಾಧನೆಯ ಹಿನ್ನೆಲೆಯಲ್ಲಿ ಬಂದ ಪರಂಪರೆಯಾಗಿದೆ. ಕರ್ನಾಟಕದಲ್ಲಿ ಎಲ್ಲಮ್ಮನ ಆರಾಧನೆಯ ಮೂಲಕ ಗುರುತಿಸಿಕೊಳ್ಳುವ ಈ ಪರಂಪರೆ ರಾಷ್ಟ್ರ ಹಾಗೂ ಜಾಗತಿಕ ಮಟ್ಟಕ್ಕೂ ವ್ಯಾಪಿಸಿದೆ. ಕೇರಳ, ತಮಿಳುನಾಡು, ಗುಜರಾತ್, ಅಜ್ಮೀರ್‌ಗಳಲ್ಲೂ ಈ ಪರಂಪರೆಯ ಆರಾಧನೆಗಳಿವೆ ಎಂದರು.

ಉತ್ತರ ಭಾರತದಲ್ಲಿ ಈ ಸಮುದಾಯವರಿಗೆ ಪೌರಾಣಿಕ ಹಿನ್ನೆಲೆ ಇರು ವುದರಿಂದ ಅಲ್ಲಿಯ ಜನ ಇವರನ್ನು ಗೌರವಿಸುತ್ತಾರೆ. ಹೀಗಾಗಿ ದಕ್ಷಿಣ ಭಾರತದ ಲಿಂಗಾಂತರಿಗಳು ಆ ಭಾಗಕ್ಕೆ ವಲಸೆ ಹೋಗುತ್ತಾರೆ. ಬಾಲ್ಯದಿಂದ ದೊಡ್ಡವರಾಗುವವರೆಗೆ ಮನೆ ಹಾಗೂ ಸಮಾಜದಿಂದ ಹಿಂಸೆಗೆ ಒಳಗಾಗುವ ಇವರು ಇಂದು ಗಂಡಸರನ್ನು ಕಂಡ ಕೂಡಲೇ ಕೆಂಡವಾಗುತ್ತಾರೆ. ಇದು ತಕ್ಷಣದ ಸಿಟ್ಟು ಅಲ್ಲ, ತಮ್ಮ ಬದುಕಿನ ನೋವಿನ ಸಂಕೇತವಾಗಿದೆ ಎಂದು ಅವರು ತಿಳಿಸಿದರು.

ಇವರನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮಾಜ ಸ್ವೀಕರಿ ಸಲು ಸಾಧ್ಯವಾಗುತ್ತದೆ. ಈ ಸಮುದಾಯದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಇಂತವರು ಕೇವಲ ಕೆಳವರ್ಗದಲ್ಲಿ ಮಾತ್ರವಲ್ಲದೆ ಶ್ರೀಮಂತ ಕುಟುಂಬದಲ್ಲೂ ಇದ್ದಾರೆ. ಗಂಡು ಹೆಣ್ಣು ಆಗದಂತೆ ತಡೆಯುವ ಥೆರಫಿಯೂ ಪ್ರಸ್ತುತ ಅಮೆರಿಕಾದಲ್ಲಿ ಸಂಶೋಧಿಸಲಾಗಿದೆ. ಇದು ಅತ್ಯಂತ ದುಬಾರಿ ಚಿಕಿತ್ಸೆಯಾಗಿದ್ದು, ಇನ್ನು ಭಾರತಕ್ಕೆ ಬಂದಿಲ್ಲ ಎಂದರು.

ಕಾರ್ಯಕ್ರಮವನ್ನು ಸಾಹಿತ್ಯ ಪೀಠದ ಅಧ್ಯಕ್ಷೆ ವೈದೇಹಿ ಉದ್ಘಾಟಿಸಿದರು. ಮಣಿಪಾಲ ವಿವಿ ಗಾಂಧಿ ಅಧ್ಯಯನ ಪೀಠದ ನಿರ್ದೇಶಕ ಪ್ರೊ.ವರದೇಶ್ ಹಿರೇಗಂಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ರಥಬೀದಿ ಗೆಳೆಯರು ಅಧ್ಯಕ್ಷ ಮುರಳೀಧರ ಉಪಾಧ್ಯ ಸ್ವಾಗತಿಸಿದರು. ಪ್ರಭಾಕರ ತುಮರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಜೋಗತಿ ನೃತ್ಯ ಕಾರ್ಯಕ್ರಮ ಜರಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X