ಬೈಕ್ ಅಪಘಾತ: ಶಿಕ್ಷಕಿ ಮೃತ್ಯು
ಉಡುಪಿ, ನ.16: ಬನ್ನಂಜೆಯ ಮಂಜುನಾಥ ಕಣ್ಣಿನ ಆಸ್ಪತ್ರೆಯ ಎದುರು ನ.15ರಂದು ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬಡಾನಿಡಿಯೂರು ನಿವಾಸಿ, ಕಾಪು ಪಡು ಸರಕಾರಿ ಶಾಲೆಯ ಶಿಕ್ಷಕಿ ಶೋಭಾರಾಣಿ(55) ಎಂದು ಗುರುತಿಸಲಾಗಿದೆ. ಇವರು ತನ್ನ ಪುತ್ರ ಸುಶಾನ್ ಎಂಬವರ ಬೈಕ್ನಲ್ಲಿ ಬೆಳಗ್ಗೆ 9ಗಂಟೆಗೆ ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆ ಬರುತ್ತಿದ್ದರು. ಸುಶಾನ್ ಬೈಕ್ಗೆ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಅವರಿಬ್ಬರು ತೀವ್ರವಾಗಿ ಗಾಯಗೊಂಡಿದ್ದರು ಎಂದು ತಿಳಿದು ಬಂದಿದೆ. ಆದರೆ ಶೋಭಾರಾಣಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಪರಾಹ್ನ 2:30ರ ಸುಮಾರಿಗೆ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story