Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎತ್ತಿನ ಹೊಳೆ ಮೂರ್ಖರಿಂದ ಮೂರ್ಖರಿಗಾಗಿ...

ಎತ್ತಿನ ಹೊಳೆ ಮೂರ್ಖರಿಂದ ಮೂರ್ಖರಿಗಾಗಿ ಮಾಡಿದ ಯೋಜನೆ: ಡಾ.ಟಿ.ವಿ.ರಾಮಚಂದ್ರ

ವಾರ್ತಾಭಾರತಿವಾರ್ತಾಭಾರತಿ20 Nov 2016 7:51 PM IST
share
ಎತ್ತಿನ ಹೊಳೆ ಮೂರ್ಖರಿಂದ ಮೂರ್ಖರಿಗಾಗಿ ಮಾಡಿದ ಯೋಜನೆ: ಡಾ.ಟಿ.ವಿ.ರಾಮಚಂದ್ರ

ಮೂಡುಬಿದಿರೆ ,ನ.20: ಎತ್ತಿನ ಹೊಳೆ ಮೂರ್ಖರಿಂದ ಮೂರ್ಖರಿಗಾಗಿ ಮಾಡಿದ ಯೋಜನೆಯಾಗಿದೆ ಎಂದು ಡಾ.ಟಿ.ವಿ.ರಾಮಚಂದ್ರ ಟೀಕಿಸಿದ್ದಾರೆ.

ಆಳ್ವಾಸ್ ನುಡಿಸಿರಿಯ ಮೂರನೆ ದಿನ ವಿಚಾರಗೋಷ್ಠಿಯಲ್ಲಿ ಪರಿಸರ ವಿಷಯದ ಬಗ್ಗೆ ಅವರು ಮಾತನಾಡುತ್ತಿದ್ದರು.

ಎತ್ತಿನ ಹೊಳೆಯ ಪ್ರದೇಶದಲ್ಲಿ ವಾರ್ಷಿಕ 3 ಸಾವಿರದಿಂದ ನಾಲ್ಕು ಸಾವಿರ ಮಿಲಿ ಮೀಟರ್ ಮಳೆ ಬೀಳುತ್ತದೆ. ಆ ಪ್ರಕಾರ ಎತ್ತಿನ ಹೊಳೆಯ ಜಲಾನಯನ ಪ್ರದೇಶದಲ್ಲಿ 24 ಟಿಎಂಸಿ ನೀರು ದೋರೆಯುವುದಿಲ್ಲ. ಅಲ್ಲಿ ವಾರ್ಷಿಕವಾಗಿ ಸುರಿಯುವ 3 ಸಾವಿರದಿಂದ 4 ಸಾವಿರ ಮಿ.ಮೀ. ಮಳೆಯಿಂದ ಒಟ್ಟು 9.85 ಟಿಎಂಸಿ ನೀರು ಮಾತ್ರ ದೊರೆಯಬಹುದು. ಈ ಪೈಕಿ ಸ್ಥಳೀಯರ ಬೇಡಿಕೆಗೆ ನೀರು ಪೂರೈಕೆಗೆ 6ಟಿಎಂಸಿ ಹಾಗೂ ಇತರ ಚಟುವಟಿಕೆಗೆ 2 ಟಿಎಂಸಿ ನೀರು ಬಳಕೆಯಾದರೆ ಉಳಿಯುವ ನೀರು ಕೇವಲ ಒಂದು ಟಿಎಂಸಿ! ಈ ರೀತಿ ಸರಕಾರಕ್ಕೆ ತಾನು ಸಲ್ಲಿಸಿದ ವರದಿ ಪರಿಗಣಿಸಲಾಗಿಲ್ಲ ಎಂದು ಡಾ.ಟಿ.ವಿ.ರಾಮಚಂದ್ರ ಟೀಕಿಸಿದ್ದಾರೆ.

ಈ ಒಂದು ಟಿಎಂಸಿ ನೀರನ್ನು ತೆಗೆದುಕೊಂಡು ಹೋಗಲು ಎತ್ತಿನಹೊಳೆ ಯೋಜನೆ ವಿಜ್ಞಾನಿಗಳು ಊಹಿಸಿ ಹೇಳಿಕೆ ನೀಡುತ್ತಾರೆ ಎನ್ನುವುದು ಸರಿಯಲ್ಲ. ಎಸಿ ರೂಂಗಳಲ್ಲಿ ಕುಳಿತು ಬ್ರಿಟೀಷರ ಕಾಲದ ಆಡಳಿತ ನೀತಿಯನ್ನು ಜಾರಿಗೆ ತರುತ್ತಿರುವ ಅಧಿಕಾರಿಗಳಿಂದ ಈ ರೀತಿಯ ಆವಾಂತರಗಳಾಗುತ್ತವೆ ಎಂದು ಪರಿಸರ ತಜ್ಞ ರಾಮಚಂದ್ರ ವಿವರಿಸಿದರು.

ಏಕ ಜಾತಿಯ ಸಸ್ಯಗಳ ನೆಡು ತೋಪುಗಳಿಂದ ಅಪಾಯ

ಏಕ ಜಾತೀಯ ಸಸ್ಯಗಳ ನೆಡು ತೋಪುಗಳಿಂದ ಪರಿಸರಕ್ಕೆ ಅಪಾಯವಿದೆ. ನೈಸರ್ಗಿಕ ಕಾಡುಗಳಲ್ಲಿ ನೀರು ಭೂಮಿಗೆ ಇಂಗುವ ರೀತಿಯಲ್ಲಿ ನೆಡು ತೋಪುಗಳಲ್ಲಿ ನೀರು ಭೂಮಿ ಸೇರುವುದಿಲ್ಲ. ಜೀವ ವೈವಿಧ್ಯವನ್ನು ಏಕರೀತಿಯ ನೆಡು ತೋಪುಗಳಲ್ಲಿ ಕಾಣಲು ಸಾಧ್ಯವಿಲ್ಲ. ವೈವಿಧ್ಯತೆ ಈ ದೇಶದ ಬೆನ್ನೆಲುಬು. ಅದು ಪರಿಸರ ಕ್ಷೇತ್ರಕ್ಕೂ ಅನ್ವಯವಾಗುತ್ತದೆ. ವೈವಿಧ್ಯ ಸಸ್ಯಗಳ ಕಾಡು ಸಮಸ್ತ ಜೀವ ರಾಶಿಗಳಿಗೆ ತಾಣವಾಗುತ್ತದೆ ಎಂದು ರಾಮಚಂದ್ರ ತಿಳಿಸಿದರು.

ಕಾವೇರಿ ನದಿ ನೀರಿನ ಹಂಚಿಕೆಯ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಯಬೇಕು

ಕಾವೇರಿ ನದಿ ನೀರಿನ ಹಂಚಿಕೆಯ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಯಬೇಕು. ಕಾವೇರಿ ಜಲಾನಯನ ಪ್ರದೇಶ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಮೂಲಕ ಹಂಚಿ ಹೋಗಿದೆ. ತಮಿಳು ನಾಡಿನ ಕಾವೇರಿ ಜಲಾನಯನ ಪ್ರದೇಶದಲ್ಲಿ ವಾರ್ಷಿಕ 500 ಮಿ.ಮೀ ಮಳೆಯಾದರೂ ನೀರಿನ ಸಮಸ್ಯೆ ಇದೆ. ನೈಸರ್ಗಿಕ ಸಂಪತ್ತಿನ ಸರಿಯಾದ ಬಳಕೆಯಾಗದೆ ಇರುವುದರಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಸಮಸ್ಯೆ ಎದುರಾಗಿದೆ ಎಂದು ರಾಮಚಂದ್ರ ತಿಳಿಸಿದರು.

ಬೆಂಗಳೂರಿನ ಪ್ರದೇಶದಲ್ಲಿ ಆಗಿರುವ ಹಸುರಿನ ನಾಶ ಹಾಗೂ ನೀರಿನ ಮಾಲಿನ್ಯದಿಂದ ನೀರಿನ ಮಟ್ಟ ಇಳಿಕೆಯಾಗಿದೆ. ನೀರಿನ ಮಟ್ಟ ನೂರಾರು ಅಡಿ ಕೆಳಗೆ ಇಳಿದಿದೆ. ಇದರಿಂದ ಆ ನೀರನ್ನು ಬಳಕೆ ಮಾಡಿದಾಗ ಅದರಲ್ಲಿ ಭೂಗರ್ಭದ ಲವಣಾಂಶ ಸೇರಿ ಕಿಡ್ನಿ ರೋಗ,ಕ್ಯಾನ್ಸರ್ ರೋಗ ಹೆಚ್ಚುವಂತೆ ಮಾಡಿದೆ. ಪ್ಲಾಸ್ಟಿಕ್ ಬಾಟಲ್‌ಗಳ ಮೂಲಕ ನಾವು ನೀರು ಸೇವಿಸುವುದರಿಂದ ಪ್ಲಾಸ್ಟಿಕ್ ಮೂಲಕ ಉಂಟಾಗುವ ವಿಷಕಾರಿ ಅಂಶ ನಮ್ಮ ದೇಹವನ್ನು ಸೇರುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು. ದೇಶದಲ್ಲಿ 279 ಜಿಲ್ಲೆಗಳಲ್ಲಿ ಬರಗಾಲ ಬರಲು, ಮಳೆ ಕಡಿಮೆ ಬೀಳಲು ನೈಸರ್ಗಿಕ ಸಂಪತ್ತಿನ ದುರ್ಬಳಕೆ ಪ್ರಮುಖ ಕಾರಣ ಎಂದು ರಾಮಚಂದ್ರ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X