ಸಂವಹನ ಕೌಶಲ್ಯ -ಭವಿಷ್ಯದ ಯೋಜನೆ ತರಬೇತಿ
ಉಡುಪಿ, ನ.22: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಸ್ನಾತಕೋತ್ತರ ಪದವಿ ವಾಣಿಜ್ಯ ವಿಭಾಗದ ವತಿಯಿಂದ ಸಂವಹನ ಕೌಶಲ್ಯ ಮತ್ತು ಭವಿಷ್ಯದ ಯೋಜನೆಯ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾರ್ಕಳ ಜ್ಞಾನ ಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ. ವಿದ್ಯಾರ್ಥಿಗಳಿಗೆ ಸಂದರ್ಶನ ಸಮಯದಲ್ಲಿ ಎದುರಿಸಬೇಕಾದ ಹಲವು ವಿಷಯದ ಬಗ್ಗೆ ತಿಳಿ ಹೇಳಿದರು. ಜೀವನದಲ್ಲಿ ಮುಖ್ಯವಾಗಿ ಅಳವಡಿಸಬೇಕಾದ ಅಂಶಗಳನ್ನು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಜೆರಾಲ್ಡ್ ಪಿಂಟೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
Next Story