ಹೃದಯಾಘಾತದಿಂದ ವ್ಯಕ್ತಿ ಮೃತ್ಯು
ಬಂಟ್ವಾಳ,ನ.26: ಕಲ್ಲಡ್ಕದ ಕುದ್ರೆಬೆಟ್ಟು ನಿವಾಸಿಯೊಬ್ಬರು ತನ್ನ ಕಾರಿನಲ್ಲಿ ಸಂಚಾರಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಸುಲೈಮಾನ್ ಸಾಹೇಬ್(65) ಮೃತ ವ್ಯಕ್ತಿ. ಇವರು ಕಾರ್ಯನಿಮಿತ ಇಂದು ತನ್ನ ಸ್ವಿಫ್ಟ್ ಕಾರಿನಲ್ಲಿ ಮಂಗಳೂರಿಗೆ ತೆರಳಿದ್ದರು. ಕುಂಟಿಕಾನದಲ್ಲಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅವರಿಗೆ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ. ಈ ವೇಳೆ ಅವರ ಕಾರು ಮುಂದಿನಿಂದ ಸಂಚಾರಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ನಿಂತಿದೆ. ಕೂಡಲೇ ಸಾರ್ವಜನಿಕರು ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಸುಲೈಮಾನ್ ಅವರು ಪೆಟ್ರೋಲ್ ಟ್ಯಾಂಕರ್ಗಳ ಮಾಲಕರಾಗಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂದುಬಳಗವನ್ನು ಅಗಲಿದ್ದಾರೆ.
Next Story