ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು
ಕಾರ್ಕಳ, ಡಿ.22: ವಿದ್ಯಾರ್ಥಿಯೊಬ್ಬ ಡಿ.21ರಂದು ಮಧ್ಯಾಹ್ನ ವೇಳೆ ಕಾರ್ಕಳ ಗಡಿಬಿಡಿ ಹೊಳೆಯ ಕಿಂಡಿ ಅಣೆಕಟ್ಟು ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕಾರ್ಕಳ ಭುವನೇಂದ್ರ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿ ಕಿರಣ್ ಎಂ.ಪಾಟೀಲ್(16) ಎಂದು ಗುರುತಿಸಲಾಗಿದೆ. ಈತ ತನ್ನ ಇತರ ಸಹಪಾಠಿಗಳೊಂದಿಗೆ ಕಿಂಡಿಅಣೆಕಟ್ಟು ಪ್ರದೇಶದಲ್ಲಿ ತೆರಳಿ, ನೀರಿಗೆ ಇಳಿದು ಸ್ನಾನ ಮಾಡುತ್ತಿದ್ದು, ಈ ವೇಳೆ ಕಿರಣ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story