ಮಂಗಳೂರಿನಿಂದ ದುಬೈಗೆ ಹೊರಟ ವಿಮಾನ ಮಸ್ಕತ್ನಲ್ಲಿ ಇಳಿಯಿತು!
ಹವಾಮಾನ ವೈಪರೀತ್ಯ ಕಾರಣ
ಮಂಗಳೂರು, ಡಿ.31: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ದುಬೈ ಬದಲು ಮಸ್ಕತ್ ವಿಮಾನ ನಿಲ್ದಾಣದಲ್ಲಿ ಇಳಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಹವಮಾನ ವೈಪರೀತ್ಯವೇ ಈ ದಿಢೀರ್ ಬದಲಾವಣೆಗೆ ಕಾರಣ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ. ಏರ್ ಇಂಡಿಯಾ ವಿಮಾನವೊಂದು ನಿನ್ನೆ ರಾತ್ರಿ 11:30ಕ್ಕೆ ಮಂಗಳೂರಿನಿಂದ ಪ್ರಯಾಣಿಕರನ್ನು ಹೇರಿಕೊಂಡು ದುಬೈಗೆ ಹೊರಟಿತ್ತು. ಈ ವಿಮಾನ ಇಂದು ಬೆಳಗ್ಗೆ ದುಬೈ ತಲುಪಬೇಕಿತ್ತು. ಆದರೆ ದಟ್ಟ ಮೋಡ ಕವಿದ ವಾತಾವರಣ ಇದ್ದ ಕಾರಣ ವಿಮಾನವನ್ನು ಇಂದು ಬೆಳಗ್ಗೆ 9:30ರ ಸುಮಾರಿಗೆ ದುಬೈಯ ಬದಲು ಮಸ್ಕತ್ನಲ್ಲಿ ಇಳಿಸಲಾಯಿತು. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದರೆ. ಯಾವುದೇ ಸಮಸ್ಯೆ ಇಲ್ಲ. ಎಲ್ಲಾ ಪ್ರಯಾಣಿಕರಿಗೂ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ
Next Story