Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಸ್ಕೃತ ಸುಭಾಷಿತ ಬದುಕಿಗೆ ದಾರಿದೀಪ:...

ಸಂಸ್ಕೃತ ಸುಭಾಷಿತ ಬದುಕಿಗೆ ದಾರಿದೀಪ: ಸುಮಿತ್ರಾ ಮಹಾಜನ್

ಅಖಿಲ ಭಾರತೀಯ ಸಂಸ್ಕೃತ ಅಧಿವೇಶನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ6 Jan 2017 8:39 PM IST
share
ಸಂಸ್ಕೃತ ಸುಭಾಷಿತ ಬದುಕಿಗೆ ದಾರಿದೀಪ: ಸುಮಿತ್ರಾ ಮಹಾಜನ್

ಉಡುಪಿ, ಜ.6: ಸಂಸ್ಕೃತ ಭಾಷೆಯ ಕಲಿಕೆಯಿಂದ ಮಕ್ಕಳ ಉಚ್ಛಾರಣೆ ಸ್ಪಷ್ಟಗೊಳ್ಳುವುದು. ವೇದಮಂತ್ರಗಳ ಪಠಣದಿಂದ ನಮ್ಮ ಮನಸ್ಸು ಶುದ್ಧ ಗೊಳ್ಳುವುದು. ಸಂಸ್ಕೃತದಲ್ಲಿರುವ ಸುಭಾಷಿತಗಳ ಅಂಶಗಳು ಉತ್ತಮ ಜೀವನಕ್ಕೆ ಸಹಕಾರಿಯಾಗಿರುತ್ತವೆ. ಇಂತಹ ಸುಭಾಷಿತಗಳನ್ನು ಬಾಲ್ಯ ಕಾಲದಿಂದಲೇ ಕಲಿಸುವ ಪ್ರಯತ್ನ ನಡೆಯಬೇಕು ಲೋಕಸಭಾ ಅಧ್ಯಕ್ಷೆ ಸುಮಿತ್ರಾ ಮಹಾಜನ್ ಹೇಳಿದ್ದಾರೆ.

ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ಸಂಸ್ಕೃತ ಭಾರತಿ ವತಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಐದನೇ ಅಖಿಲ ಭಾರತ ಸಂಸ್ಕೃತ ಅಧಿವೇಶನವನ್ನು ಇಂದು ಬೆಳಗ್ಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.

 ಎಲ್ಲಾ ಸುಭಾಷಿತಗಳನ್ನು ಅರ್ಥಪೂರ್ಣವಾಗಿ ಅಭ್ಯಾಸ ಮಾಡಿದರೆ ವ್ಯಕ್ತಿಯ ವ್ಯಕ್ತಿತ್ವ ವಿಕಸನವಾಗಿ ದೇಶದ ಉತ್ತಮ ವ್ಯಕ್ತಿಯಾಗಿ ಮೂಡಿಬರುತ್ತಾನೆ. ಹೀಗಾಗಿ ಸುಭಾಷಿತಗಳು ನಮ್ಮೆಲ್ಲರ ಬದುಕಿಗೆ ದಾರಿದೀಪವಿದ್ದಂತೆ ಎಂದವರು ಅಭಿಪ್ರಾಯಪಟ್ಟರು.

 ಸಂಸ್ಕೃತ ಪ್ರಾಚೀನ ಭಾಷೆಯಾದರೂ ಅದರಲ್ಲಿರುವ ಸಂಗತಿಗಳು ಇಂದಿಗೂ ಪ್ರಸ್ತುತವಾಗಿವೆ. ವಿಶ್ವಕಲ್ಯಾಣದ ಸೂತ್ರ ಸಂಸ್ಕೃತ ಸಾಹಿತ್ಯ ಹಾಗೂ ವೇದಗಳಲ್ಲಿವೆ. ಸಂಸ್ಕೃತ ಭಾರತದ ಶ್ವಾಸಕೋಶವಿದ್ದಂತೆ. ಮುಂದೊಂದು ದಿನ ಸಂಸ್ಕೃತ ವಿಶ್ವಭಾಷೆ ಯಾಗುವ ವಿಶ್ವಾಸ ತಮಗಿದೆ ಎಂದು ಸುಮಿತ್ರಾ ಮಹಾಜನ್ ಹೇಳಿದರು.

 ಉತ್ತಮ ಗುಣಗಳು ಸಂಸ್ಕೃತ ಸಾಹಿತ್ಯದಲ್ಲಿ ಅಡಗಿದ್ದು, ಅವುಗಳನ್ನು ಹೊರತೆಗೆಯಬೇಕು. ಸಂಸ್ಕೃತ ಭಾಷೆಯನ್ನು ಸೀಮಿತಗೊಳಿಸುವ ಬದಲು ಅದನ್ನು ವಿಸ್ತರಿಸುವ ಕೆಲಸವಾಗಬೇಕು. ಸಂಸ್ಕೃತದ ಬಗ್ಗೆ ಮಾತನಾಡುವ ಬದಲು ಸಂಸ್ಕೃತಕ್ಕಾಗಿ ಕೆಲಸಮಾಡಬೇಕು ಎಂದರು.

ಇಂದಿನ ಸ್ಥಿತಿಯಲ್ಲಿ ಭಾರತಕ್ಕೆ ಸಂಸ್ಕೃತದ ಅಗತ್ಯವಿದೆ. ಅದು ಕೇವಲ ಭಾಷೆಯಲ್ಲ, ಅದೊಂದು ವೈಜ್ಞಾನಿಕ ಭಾಷೆ. ಇದರಲ್ಲಿ ತಂತ್ರಜ್ಞಾನ, ವಿಜ್ಞಾನ, ವೇದ, ಉಪನಿಷತ್, ಗೀತೆ ಎಲ್ಲವೂ ಇದೆ. ಈ ದೇಶದ ಸಂಸ್ಕೃತಿ ಸಂಸ್ಕೃತದಲ್ಲಿದೆ. ಅದನ್ನು ತಿಳಿಯದೇ ನಾವು ಭಾರತವನ್ನು ಅರಿಯಲು ಸಾಧ್ಯವಿಲ್ಲ ಎಂದು ಸುಮಿತ್ರಾ ಮಹಾಜನ್ ಹೇಳಿದರು. ಇದೇ ಸಂದರ್ಭದಲ್ಲಿ ಅವರು ಆರೆಸ್ಸೆಸ್‌ನ ಎರಡನೇ ಸರಸಂಘಚಾಲಕರಾದ ಗುರೂಜಿ ಅವರ ಕುರಿತ ಪುಸ್ತಕದ ಸಂಸ್ಕೃತ ಅನುವಾದವನ್ನು ಬಿಡುಗಡೆಗೊಳಿಸಿದರು.

ಆಶೀರ್ವಚನ ನೀಡಿದ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಮಾತನಾಡಿ, ಸಂಸ್ಕೃತ ಕೇವಲ ದೇವರ ಭಾಷೆಯಲ್ಲ, ಅದು ಭಾರತೀಯರೆಲ್ಲರ ಮಾತೃಭಾಷೆಯಾಗಿದೆ ಎಂದರು. ದೇಶದ ಎಲ್ಲಾ ಭಾಷೆಗಳು ಪರಿಮಿತಯೊಳಗಿ ದ್ದರೆ,ಸಂಸ್ಕೃತ ಮಾತ್ರ ಇಡೀ ದೇಶದ,ಎಲ್ಲಾ ರಾಜ್ಯಗಳಲ್ಲೂ ಕಂಡುಬರುತ್ತಿದೆ ಎಂದವರು ನುಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಸಂಸ್ಕೃತ ವಿಶ್ವದಲ್ಲೇ ಅತ್ಯಂತ ಶ್ರೀಮಂತ ಭಾಷೆ. ಈ ಭಾಷೆಯ ಅಧ್ಯಯನಕ್ಕೆ ಅನಾದಾರ ಸರಿಯಲ್ಲ. ಸಂಸ್ಕೃತ ಭಾಷೆಯ ಕಲಿಕೆಗೆ ಅವಕಾಶ ಕಲ್ಪಿಸಬೇಕು. ಇನ್ನು ಮುಂದೆ ಎನ್ನೆಸ್ಸೆಸ್ ಶಿಬಿರಗಳಲ್ಲಿ ಸುಭಾಷಿತಗಳ ಕಲಿಕೆಗೆ ವ್ಯವಸ್ಥೆ ಮಾಡುವುದಾಗಿ ನುಡಿದರು.

ಸಂಸ್ಕೃತ ಭಾರತಿಯ ಅಖಿಲ ಭಾರತ ಅಧ್ಯಕ್ಷ ಡಾ.ಚಾಂದ ಕಿರಣ್ ಸಲೂಜಾ, ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ ಅವರು ಸಮಾವೇಶ ವನ್ನುದ್ದೇಶಿಸಿ ಮಾತನಾಡಿದರು. ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

ಅಖಿಲ ಭಾರತ ಸಂಸ್ಕೃತ ಭಾರತಿಯ ಸಂಪರ್ಕ ಪ್ರಮುಖ ಸತ್ಯನಾರಾಯಣ ಭಟ್ಟ ಅತಿಥಿಗಳನ್ನು ಸ್ವಾಗತಿಸಿದರೆ, ಅಖಿಲ ಭಾರತ ಮಹಾಮಂತ್ರಿ ನಂದಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಕೃತ ಭಾರತಿಯ ಪ್ರಾಂತ ಅಧ್ಯಕ್ಷ ಡಾ.ಶ್ರೀನಿವಾಸ ವರಖೇಡಿ ಕಾರ್ಯಕ್ರಮ ನಿರೂಪಿಸಿದರೆ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಬಿ.ಪುರಾಣಿಕ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X