ಜ.24: ತುಳುನಾಡ ಗರಡಿಗಳ ಸಮ್ಮೇಳನ
ಉಡುಪಿ, ಜ.8: ಶಿಕ್ಷಣ ತಜ್ಞ, ಕಲಾಪೋಷಕ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆಯಲ್ಲಿ ಉಡುಪಿಯಲ್ಲಿ ಜರಗಲಿರುವ ತುಳುನಾಡ ಗರಡಿಗಳ 2ನೆ ಮಹಾ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸಂಸದೆ ಶೋಭಾ ಕರಂದ್ಲಾಜೆ ಇಂದು ಮಣಿಪಾಲದ ಸಂಸದರ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ತುಳುನಾಡಿನಾದ್ಯಂತ ಇರುವ ಗರಡಿಗಳ ಸಂಸ್ಕೃತಿ ಐತಿಹ್ಯಗಳನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಆಸಕ್ತಿದಾಯಕವಾಗಿ ಮಾಡುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಈ ಸಮ್ಮೇಳನ ಜ.24ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಜರಗಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಆಮಂತ್ರಣ ಪತ್ರಿಕೆ ಬಿಡುಗಡೆಯ ಸಂದರ್ಭದಲ್ಲಿ ಉದ್ಯಮಿಗಳಾದ ಕಿರಣ್ ಕೊಡ್ಲಿ, ಕೆ. ಉದಯಕುಮಾರ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಸಂಚಾಲಕ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಶ್ಯಾಮಲಾ ಎಸ್. ಕುಂದರ್ ಮತ್ತು ಸಂಧ್ಯಾ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
Next Story