ಕಡಬ ತಾಲೂಕು ರಚನೆಗೆ ಹೆಚ್ಚಿನ ಒತ್ತು: ಸಚಿವ ರಮಾನಾಥ ರೈ
ಕಡಬ: ವಿವಿಧ ಕಾಮಗಾರಿ ಶಿಲಾನ್ಯಾಸ, ನೂತನ ಕಟ್ಟಡಗಳ ಉದ್ಘಾಟನೆ
ಕಡಬ, ಜ.10: ಕಡಬ ತಾಲೂಕು ಕೇಂದ್ರವಾಗಲು ಎಲ್ಲ ಅರ್ಹತೆಯನ್ನು ಹೊಂದಿದ್ದು, ಈಗಾಗಲೇ ಘೋಷಣೆಯಾಗಿರುವ ತಾಲೂಕುಗಳ ಪೈಕಿ ಕಡಬ ತಾಲೂಕು ರಚಿಸಲು ಹೆಚ್ಚಿನ ಒತ್ತು ನೀಡಲಾಗುವುದು. ಕಡಬದಲ್ಲಿ ಪ್ರಥಮ ದರ್ಜೆ ಕಾಲೇಜು ಮಂಜೂರು ಮಾಡಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು.
ಮಂಗಳವಾರ ಕಡಬದ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿ ಶಿಲಾನ್ಯಾಸ, ಕಡಬ ಪಶು ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ, ಕೊರಂದೂರು ಅಂಗನವಾಡಿ ಕಟ್ಟಡ ಉದ್ಘಾಟನೆ, ಕಡಬ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ, ಕಡಬ ಸಂಯುಕ್ತ ಪಪೂ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಬಳಿಕ ಕಡಬ ಆಸ್ಪತ್ರೆ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನರ್ಬಾಡ್ ಯೋಜನೆಯಡಿ 21 ಕೋ.ರೂ ವೆಚ್ಚದಲ್ಲಿ ಜಿಲ್ಲೆಯ 3 ಸಮುದಾಯ, 4 ಪ್ರಾಥಮಿಕ, 5 ಆರೋಗ್ಯ ಉಪಕೇಂದ್ರಗಳ ಅಭಿವೃದ್ಧಿಪಡಿಸಲು ಅನುದಾನ ಮಂಜೂರಾಗಿದ್ದು, ಕಾಮಗಾರಿ ಈಗಾಗಲೇ ಚಾಲ್ತಿಯಲ್ಲಿದೆ. ರಾಜ್ಯ ಸರಕಾರ ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪಣತೊಟ್ಟಿದೆ. ಈಗಾಗಲೇ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಮನ್ನಣೆ ಗಳಿಸಿದೆ ಎಂದು ಹೇಳಿದರು.
ಕಡಬ ಸಮುದಾಯ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆಯ ಬಗ್ಗೆ ಪ್ರಸ್ತಾಪಿಸಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಪಿ.ವರ್ಗಿಸ್ ಅವರ ಬೇಡಿಕೆಗೆ ಸ್ಪಂದಿಸಿದ ಸಚಿವರು, ವಾರದಲ್ಲಿ ಮೂರು ದಿನದಲ್ಲಿ ಕೊಯ್ಲ ಮತ್ತು ಪಂಜದ ಆರೋಗ್ಯ ಕೇಂದ್ರದ ವೈದ್ಯರು ಕಡಬದಲ್ಲಿ ಕರ್ತವ್ಯ ನಿರ್ವಹಿಸುವಂತೆ ಕ್ರಮಕೈಗೊಳ್ಳುವಂತೆ ಜಿಲ್ಲಾ ಅರೋಗ್ಯಾಕಾರಿಗೆ ಸೂಚಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಅಂಗಾರ ಮಾತನಾಡಿ, ಚುನಾಯಿತ ಜನಪ್ರತಿನಿಗಳ ಮೇಲೆ ಆರೋಪ ಹೊರಿಸುವ ಬದಲು ಸರಕಾರದ ಯೋಜನೆಯೊಂದಿಗೆ ನಮ್ಮ ಸಹಭಾಗಿತ್ವ ಮುಖ್ಯ. ಜನರ ನಿರೀಕ್ಷೆಗೆ ತಕ್ಕಂತೆ ಯೋಜನೆಗಳು ಅನುಷ್ಠಾನಗೊಳಿಸಲು ಸಾಧ್ಯವಾಗದಿದ್ದರೂ ಅಭಿವೃದ್ಧಿಗಾಗಿ ಯೋಜನೆಗಳನ್ನು ಹಮ್ಮಿಕೊಂಡಾಗ ಜನರು ಸಹಕಾರ ನೀಡಬೇಕೆಂದರು.
ಅಕ್ರಮ ಸಕ್ರಮ ಮತ್ತು 94ಸಿ ಅಡಿಯಲ್ಲಿ ಮಂಜೂರಾದ ಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿಲಾಯಿತು. ಕಡಬ ವಿಶೇಷ ತಹಶೀಲ್ದಾರ್ ಲಿಂಗಯ್ಯ ಹಕ್ಕುಪತ್ರ ಲಾನುಭವಿಗಳ ಪಟ್ಟಿ ವಾಚಿಸಿದರು.
ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ ಅಧ್ಯಕ್ಷೆ ಭವಾನಿ ಚಿದಾನಂದ ಶುಭಹಾರೈಸಿದರು. ಸಮಾಜ ಕಲ್ಯಾಣ ಅಭಿವೃದ್ಧಿ ಮಂಡಳಿ ರಾಜ್ಯಾಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಜಿಪಂ ಸದಸ್ಯರಾದ ಸರ್ವೋತ್ತಮ ಗೌಡ, ಸಾಹುಲ್ ಹಮೀದ್, ತಾಪಂ ಸದಸ್ಯರಾದ ತಾರ ಕೇಪುಳು, ಪಿ.ವೈ ಕುಸುಮಾ, ಗಣೇಶ್ ಕೈಕುರೆ, ವಲ್ಸಮ್ಮಾ ಕೆ.ಟಿ., ಪಝಲ್ ಕೋಡಿಂಬಾಳ, ಕಡಬ ಗ್ರಾಪಂ ಅಧ್ಯಕ್ಷ ಬಾಬು ಮುಗೇರ, ನೂಜಿಬಾಳ್ತಿಲ ಗ್ರಾಪಂ ಅಧ್ಯಕ್ಷ ಸದಾನಂದ ಗೌಡ, ಕುಟ್ರುಪ್ಪಾಡಿ ಗ್ರಾಪಂ ಅಧ್ಯಕ್ಷ ಜಾನಕಿ, ಮರ್ದಾಳ ಗ್ರಾಪಂ ಅಧ್ಯಕ್ಷೆ ಲಲಿತಾ ಎಂ, ಬಿಳಿನೆಲೆ ಗ್ರಾಪಂ ಅಧ್ಯಕ್ಷೆ ಶಾರಾದ, ತಾಪಂ ಇಒ ಜಗದೀಶ್ ಎಸ್., ರಾಜೀವ್ ಗಾಂ ಸಿಂಡಿಕೇಟ್ ಸದಸ್ಯ ಡಾ.ರಘು, ಪಶು, ಆರೋಗ್ಯ, ಅಲ್ಪಸಂಖ್ಯಾತ ಇಲಾಖಾಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.ರೋಗ್ಯ ಇಲಾಖಾಕಾರಿ ರಘುಚಂದ್ರ ಹೆಬ್ಬಾರ್ ತಾಂತ್ರಿಕ ವರದಿ ಮಂಡಿಸಿದರು. ಜಿಲ್ಲಾ ಆರೋಗ್ಯಾಕಾರಿ ಡಾ.ರಾಮಕೃಷ್ಣ ರಾವ್ ಸ್ವಾಗತಿಸಿದರು. ಜಯರಾಮ ಪೂಜಾರಿ ನಿರೂಪಿಸಿ, ವಂದಿಸಿದರು.