ಸಾವಿರ ಕಂಬದ ಬಸದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ
ಮೂಡುಬಿದಿರೆ , ಜ.11 : ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಪರಿಕಲ್ಪನೆಯ ಸ್ವಚ್ಛಾ ನಿರ್ಮಲ ಶ್ರದ್ಧಾ ಕಾರ್ಯಕ್ರಮಕ್ಕೆ ಪೂರಕವಾಗಿ ಆಳ್ವಾಸ್ ಪದವಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಮೂಡುಬಿದಿರೆಯ ಸಾವಿರ ಕಂಬದ ಬಸದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡರು.
ಮೂಡುಬಿದಿರೆ ಜೈನಮಠದ ಮಠಾಧೀಶ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕಪಂಡಿತಾಚರ್ಯವರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ 60ಕ್ಕೂ ಅಧಿಕ ವಿದ್ಯಾರ್ಥಿ ಸ್ವಯಂ ಸೇವಕರು ಪಾಲ್ಗೊಂಡರು.
ಎನ್ಎಸ್ಎಸ್ ಅಧಿಕಾರಿ ಗುರುದೇವ್ ಉಪಸ್ಥಿತರಿದ್ದರು.
Next Story