ಉಡುಪಿ; ಎಲ್ಲ ಸ್ಥಾನಗಳಿಗೆ ಬಿಜೆಪಿ ಸ್ಪರ್ಧೆ: ಮಟ್ಟಾರ್
ಇಂದು ಎಪಿಎಂಸಿ ಚುನಾವಣೆ
ಉಡುಪಿ, ಜ.11: ಜಿಲ್ಲೆಯ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಕೃಷಿ ಉತ್ಪನ್ನ ಸಮಿತಿ(ಎಪಿಎಂಸಿ)ಗಳಿಗೆ ಜ.12ರಂದು ಚುನಾವಣೆ ನಡೆಯಲಿದ್ದು, ಮೂರು ಮಾರುಕಟ್ಟೆಯ ಪ್ರತಿಯೊಂದು ಸಮಿತಿಯಲ್ಲಿರುವ 13 ಸ್ಥಾನಗಳಿಗೆ ಬಿಜೆಪಿ ಸ್ಪರ್ಧಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.
ಉಡುಪಿಯ ಬಿಜೆಪಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ದಿನಚರಿ ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು. ಈಗಾಗಲೇ ಕಾರ್ಕಳದಲ್ಲಿ ಒಂದು ಬಿಜೆಪಿ ಹಾಗೂ ಒಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದು, ಕುಂದಾಪುರದ 7 ಸ್ಥಾನಗಳಲ್ಲಿ ಬಿಜೆಪಿಯ 4 ಹಾಗೂ ಕಾಂಗ್ರೆಸ್ನ 3 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಉಡುಪಿಯಲ್ಲಿ ವರ್ತಕರ ಮತ್ತು ಬಾರ್ಕೂರು ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಉಳಿದ 27 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಇದೆ ಎಂದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಕುತ್ಯಾರು ನವೀನ್ ಶೆಟ್ಟಿ, ಸಂಧ್ಯಾ ರಮೇಶ್, ವೀಣಾ ಶೆಟ್ಟಿ, ಹೇಮಂತ್, ಶ್ರೀಶ ನಾಯಕ್ ಉಪಸ್ಥಿತರಿದ್ದರು.