ಮಸೀದಿಗೆ ಕಲ್ಲೆಸೆತ, ಕೊಲೆ ಪ್ರಕರಣದ ತನಿಖೆ ಮುಂದುವರಿಕೆ
ಉಡುಪಿ, ಜ.29: ಆದಿಉಡುಪಿಯ ಬಳಿ ಮಸೀದಿಗೆ ಕಲ್ಲೆಸೆತ ಹಾಗೂ ರಿಕ್ಷಾ ಚಾಲಕ ಹನ್ೀ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದು, ಆರೋಪಿಗಳ ಕುರಿತು ಈವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ಮಸೀದಿಯ ಕಲ್ಲೆಸೆತ ಪ್ರಕರಣದ ಆರೋಪಿಯ ಪತ್ತೆಗಾಗಿ ಸಿಸಿಟಿವಿಯಲ್ಲಿ ಸೆರೆಯಾದ ಚಿತ್ರದೊಂದಿಗೆ ಪೊಲೀಸರು ತಹಶೀಲ್ದಾರ್ ಕಚೇರಿಯ ಮೋರೆ ಹೋಗಿದ್ದು, ಅಲ್ಲಿರುವ ಗುರುತಿನ ಚೀಟಿಯ ಆಧಾರದಲ್ಲಿ ಆರೋಪಿಯ ಪತ್ತೆ ಕಾರ್ಯನಡೆಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಹನ್ೀ ಕೊಲೆ ಪ್ರಕರಣಕ್ಕೆ ಸಂಬಂಸಿದಂತೆ ರಚಿಸಲಾದ ಐದು ಪೊಲೀಸ್ ತಂಡವು ವಿವಿಧ ದಿಕ್ಕಿನಲ್ಲಿ ತನಿಖೆ ಮುಂದುವರಿಸಿದ್ದು, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧೆಡೆಯ ಸಿಸಿಟಿವಿ ಕ್ಯಾಮರಾಗಳಲ್ಲಿನ ದೃಶ್ಯಗಳನ್ನು ಕಲೆ ಹಾಕುವ ಕಾರ್ಯ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.
Next Story