ಮಸೀದಿಗೆ ಕಲ್ಲು ತೂರಾಟ;ಕೊಲೆ ಆರೋಪಿಗಳ ಬಂಧನಕ್ಕೆ ಆಗ್ರಹ
ಉಡುಪಿ, ಜ.30: ರಿಕ್ಷಾ ಚಾಲಕ ಹನ್ೀ ಕೊಲೆ ಹಾಗೂ ಆದಿಉಡುಪಿ ಬಲಿ ಮಸೀದಿೆ ಕಲ್ಲು ತೂರಾಟ ನಡೆಸಿದ ಆರೋಪಿಗಳನ್ನು ಕೂಡಲೇ ಬಂಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಸಮಿತಿ ಸೋಮವಾರ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅೀಕ್ಷಕ ವಿಷ್ಣುವರ್ಧನ್ರಿಗೆ ಮನವಿ ಸಲ್ಲಿಸಿತು.
ಉಡುಪಿಯಲ್ಲಿ ಶಾಂತಿ ಕದಡುವ ಪ್ರಯತ್ನವನ್ನು ಸ್ಥಾಪಿತ ಹಿತಾಸಕ್ತಿಗಳು ನಡೆಸುತ್ತಿದ್ದು, ಇದಕ್ಕೆ ಪೂರಕ ಎಂಬಂತೆ ಈ ಕೃತ್ಯಗಳು ನಡೆದಿವೆ. ಈ ಎರಡು ಪ್ರಕರಣಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕರವೇ ಮನವಿಯಲ್ಲಿ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಅನ್ಸಾರ್ ಅಹ್ಮದ್, ಸುೀರ್ ಪೂಜಾರಿ, ಕಾರ್ಯದರ್ಶಿ ಗೋಪಾಲಕೃಷ್ಣ, ಮುಹಮ್ಮದ್ ಆರ್ಿ, ಪ್ರವೀಣ್ ಸಾಲ್ಯಾನ್, ನಾಸಿರ್ ಯಾಕೂಬ್, ಮುಮ್ತಾಝ್ ಅಲಿ, ಶಾಹಿಲ್ ರಹ್ಮತ್ತುಲ್ಲಾ ಉಪಸ್ಥಿತರಿದ್ದರು.
Next Story