ಪುದು ಗ್ರಾಪಂ ಮಾಜಿ ಸದಸ್ಯನಿಗೆ ಕೊಲೆ ಬೆದರಿಕೆ
ವಿಎಚ್ಪಿ, ಬಜರಂಗದಳದ ಹೆಸರಿನಲ್ಲಿ ಬಂದ ಪತ್ರ
ಬಂಟ್ವಾಳ, ೆ.3: ತಾಲೂಕಿನ ಪುದು ಗ್ರಾಪಂ ಮಾಜಿ ಸದಸ್ಯರೊಬ್ಬರಿಗೆ ಅಂಚೆ ಮೂಲಕ ಕೊಲೆ ಬೆದರಿಕೆ ಪವೊಂದು ಬಂದಿದ್ದು ಈ ಬಗ್ಗೆ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪುದು ಗ್ರಾಮದ ಅಮೆಮಾರ್ ನಿವಾಸಿ, ಮಾಜಿ ಗ್ರಾಪಂ ಸದಸ್ಯ ಮುಹಮ್ಮದ್ ಇಕ್ಬಾಲ್ ಎಂಬವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ರಂಗಿಪೇಟೆಯ ಹಳೆ ರಸ್ತೆಯಲ್ಲಿ ಗುಜರಿ ಅಂಗಡಿಯನ್ನು ಹೊಂದಿರುವ ಇಕ್ಬಾಲ್ ಕಳೆದ ವಾರ ತನ್ನ ಸಹೋದರನ ಪುತ್ರನಿಗೆ ತುರ್ತು ಚಿಕಿತ್ಸೆ ನೀಡಲು ರಂಗಿಪೇಟೆಯ ವೈದ್ಯರೊಬ್ಬರು ನಿರಾಕರಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಿಸಲು ತೆರಳಿದ್ದ ವೇಳೆ ವೈದ್ಯ ಮತ್ತು ಇಕ್ಬಾಲ್ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಲೇರಿ ಬಳಿಕ ರಾಜಿ ಸಂಧಾನದೊಂದಿಗೆ ಇತ್ಯರ್ಥಗೊಂಡಿತ್ತು. ಈ ವಿಷಯವನ್ನೇ ಪ್ರಸ್ತಾವಿಸಿ ಕೊಲೆ ಬೆದರಿಕೆ ಪತ್ರ ಬಂದಿದೆ ಎನ್ನಲಾಗಿದೆ. ಪತ್ರದಲ್ಲಿ ಕೆಟ್ಟದಾಗಿ ನಿಂದಿಸಿರುವುದಲ್ಲದೆ, ಡಾಕ್ಟರ್ಗೆ ಬೈದ ನಿನ್ನನ್ನು ರಂಗಿಪೇಟೆಯ ಗುಜರಿ ವ್ಯಾಪಾರಿ ಹಮೀದ್ನನ್ನು ಕೊಲೆ ಮಾಡಿದ ರೀತಿಯಲ್ಲೇ ಒಂದೇ ವಾರದೊಳಗೆ ಮರ್ಡರ್ ಮಾಡುತ್ತೇನೆ ಎಂದು ಬೆದರಿಕೆ ಹಾಕಲಾಗಿದೆ ಎಂದು ದೂರಲಾಗಿದೆ. ಪತ್ರದ ಒಂದು ಭಾಗದಲ್ಲಿ ಇಕ್ಬಾಲ್ ಹೆಸರು ಮತ್ತು ವಿಳಾಸ ಬರೆದಿದ್ದರೆ ಇನ್ನೊಂದು ಭಾಗದಲ್ಲಿ ವಿಎಚ್ಪಿ, ಬಜರಂಗದಳ ರಂಗಿಪೇಟೆ ಬರೆಯಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಪ್ರಕರಣ ದಾಖಲಿಸುವ ಕಾರ್ಯ ನಡೆಯುತ್ತಿದೆ ಎಂದು ಮುಹಮ್ಮದ್ ಇಕ್ಬಾಲ್ ತಿಳಿಸಿದ್ದಾರೆ.