ಫೆ.15ರಿಂದ ಚಾಮುಂಡೇಶ್ವರಿದೇವಿ ಬ್ರಹ್ಮ ಕಲಶೋತ್ಸವ
ಮಂಗಳೂರು, ಫೆ.8: ನಗರದ ಪಚ್ಚನಾಡಿ ಶಿವಾಜಿ ನಗರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶ್ರೀಕ್ಷೇತ್ರದ ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಗಳ ನೇತೃತ್ವದಲ್ಲಿ ಫೆ.15ರಿಂದ 20ರವರೆಗೆ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ಜರಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಮಲ್ಲೂರು ಪುರುಷೋತ್ತಮ ಕೊಟ್ಟಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಸಂದರ್ಭ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ವಿಠಲ ಶಟ್ಟಿ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಬೊಳ್ಳಳ್ಳಿ ಮಾರುಗುತ್ತು ರಘುರಾಮ್ ಶೆಟ್ಟಿ, ಕಾರ್ಯಾಧ್ಯಕ್ಷ ವಿವೇಕ್ ಗಾಣಿಗ, ಮೋಹನ್ ಪಚ್ಚನಾಡಿ, ನಟರಾಜ್ ಪಚ್ಚನಾಡಿ ಉಪಸ್ಥಿತರಿದ್ದರು.
Next Story