ಮಂಗಳೂರು ವಿವಿಯಲ್ಲಿ ‘ಬ್ಯಾರಿ ಅಧ್ಯಯನ ಕೇಂದ್ರ’ ಸ್ಥಾಪನೆಗೆ ಸಿಎಂ ಗೆ ಮನವಿ
ಮಂಗಳೂರು, ಫೆ. 10: ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೊಳಪಟ್ಟ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ನೇತೃತ್ವದ ನಿಯೋಗವು ರಾಜ್ಯ ಸಚಿವ ಯು.ಟಿ,ಖಾದರ್ ಅವರೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಅವರ ಕಚೇರಿಯಲ್ಲಿ ಗುರುವಾರ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಮಂಗಳೂರಿನಲ್ಲಿ ‘ಬ್ಯಾರಿ ಸಾಹಿತ್ಯ ಭವನ’ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಬ್ಯಾರಿ ಅಧ್ಯಯನ ಕೇಂದ್ರ’ ಸ್ಥಾಪಿಸುವಂತೆ ಕೋರಿಕೆಯನ್ನು ಮಂಡಿಸಿದರು. ನಿಯೋಗದಲ್ಲಿ ಸಚಿವರ ಆಪ್ತ ಸಹಾಯಕ ಮುಹಮ್ಮದ್ ಲಿಬ್ಝ್, ಅಕಾಡಮಿಯ ರಿಜಿಸ್ಟ್ರಾರ್ ಉಮರಬ್ಬ, ಬಿ.ಎ.ಅಬೂಬಕರ್, ಎನ್.ಇ.ಮುಹಮ್ಮದ್, ಮುಹಮ್ಮದ್ ಸಾಲಿ ಮಳವೂರು ಮೊದಲಾದವರು ಉಪಸ್ಥಿತರಿದ್ದರು.
Next Story