ಉಪ್ಪಿನಂಗಡಿ: ಕಾರು ಢಿಕ್ಕಿ; ಪಾದಚಾರಿ ಮೃತ್ಯು
ಉಪ್ಪಿನಂಗಡಿ, ೆ.11: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಲಾವತ್ತಡ್ಕ ಎಂಬಲ್ಲಿ ಶನಿವಾರ ನಡೆದಿದೆೆ.
ಮೃತರನ್ನು ಟ್ಯಾಂಕರ್ ಚಾಲಕ ನೆವಿಸನ್ ಎಂದು ಗುರುತಿಸಲಾಗಿದೆ.
ಅಡುಗೆ ಅನಿಲವನ್ನು ತುಂಬಿಸಿಕೊಂಡು ಹೋಗುತ್ತಿದ್ದ ನೆವಿಸನ್ ಚಹಾ ಕುಡಿಯಲೆಂದು ಲಾವತ್ತಡ್ಕದ ಹೆದ್ದಾರಿ ಬದಿಯಲ್ಲಿ ಟ್ಯಾಂಕರ್ ನಿಲ್ಲಿಸಿ, ಇಳಿದು ನಡೆದುಕೊಂಡು ಹೋಗುತ್ತಿದ್ದರು.
ಈ ಸಂದರ್ಭ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರೊಂದು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್ಗೆ ಢಿಕ್ಕಿ ಹೊಡೆದು, ಬಳಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನೆವಿಸನ್ರವರಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಹೆದ್ದಾರಿಯ ಇನ್ನೊಂದು ಪಾರ್ಶ್ವದಲ್ಲಿದ್ದ ಮತ್ತೊಂದು ಟ್ಯಾಂಕರ್ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರೆ. ಆದರೆ ಟ್ಯಾಂಕರ್ ಚಾಲಕ ನೆವಿಸನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ನೆವಿಸನ್ ತಮಿಳುನಾಡಿನ ತಿರುನಲ್ವೇಲಿ ಯ ನಾಗರಕೋಯಿಲ್ ಎಂಬಲ್ಲಿನ ನಿವಾಸಿ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಸಿ ಮತ್ತೊಂದು ಟ್ಯಾಂಕರ್ ಚಾಲಕ ತಂಗವೇಲು ಎಸ್. ಪುತ್ತೂರು ಸಂಚಾರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.