ಕೆಮ್ಮಾಯಿಯಲ್ಲಿ ಸರಕಾರಿ ಬಸ್ಗೆ ಕಲ್ಲೆಸೆತ
ಪುತ್ತೂರು, ೆ.25: ಕೇರಳ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ಜಿಲ್ಲೆಗೆ ಆಗಮಿಸುತ್ತಿರುವುದನ್ನು ವಿರೋಸಿ ಸಂಘಪರಿವಾರ ಸಂಘಟನೆಗಳು ನೀಡಿದ ಬಂದ್ ಕರೆಗೆ ಪುತ್ತೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಮ್ಮಾಯಿ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ಗೆ ಕಲ್ಲೆಸೆತ ನಡೆಸಲಾಗಿದೆ.
ಬೆಳಗ್ಗಿನ ವೇಳೆಯಲ್ಲಿ ಹೆಚ್ಚಿನ ಅಂಗಡಿ ಗಳು ಮುಚ್ಚಿದ್ದು, 11ರ ಬಳಿಕ ಕೆಲವು ಅಂಗಡಿಗಳು ತೆರೆದುಕೊಂಡವು. ಖಾಸಗಿ ಬಸ್ಗಳು ಓಡಾಟ ಸ್ಥಗಿತಗೊಳಿಸಿತ್ತು. ಕೆಎಸ್ಸಾರ್ಟಿಸಿ ಬಸ್ಗಳು ಎಂದಿನಂತೆ ಸಂಚರಿಸುತ್ತಿದ್ದವು. ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ಸೊಂದಕ್ಕೆ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ಅಲ್ಲದೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪುತ್ತೂರು ಬೈಪಾಸ್ನಲ್ಲಿ ಬೆಳಗ್ಗೆ ರಸ್ತೆಯಲ್ಲಿ ಟೈರ್ ಉರಿಸಲಾಗಿತ್ತು. ಸ್ಥಳಕ್ಕಾಗ ಮಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನಗರದ 2 ಖಾಸಗಿ ಕಾಲೇಜುಗಳು ರಜೆ ನೀಡಲಾಗಿತ್ತು. ಉಳಿದಂತೆ ಎಲ್ಲ ಖಾಸಗಿ ಹಾಗೂ ಸರಕಾರಿ ಶಾಲಾ ಕಾಲೇಜುಗಳು ಎಂದಿನಂತೆ ತರಗತಿ ನಡೆಸಿದ್ದವು.
ಎಲ್ಲ ಸರಕಾರಿ ಇಲಾಖೆ ಗಳು ಕಾರ್ಯನಿರ್ವಹಿಸಿತ್ತು. ನಗರದಲ್ಲಿ ಜನಸಂಚಾರ ವಿರಳವಾಗಿತ್ತು. ಬಿಎಂಎಸ್ ಸಂಘಟನೆಯ ಆಟೊ ರಿಕ್ಷಾ ಹೊರತುಪಡಿಸಿ ಉಳಿದ ಇತರ ಸಂಘಟನೆಗಳ ಆಟೊರಿಕ್ಷಾಗಳು, ಕಾರುಗಳು, ದ್ವಿಚಕ್ರ ವಾಹಗಳು ಓಡಾಟ ನಡೆಸುತ್ತಿದ್ದವು. ನಗರದ ಹೊರ ಪ್ರದೇಶಗಳಾದ ಕುಂಬ್ರ, ತಿಂಗಳಾಡಿ, ಪಾಣಾಜೆ, ಸವಣೂರು ಇನ್ನಿತರ ಕಡೆಗಳಲ್ಲಿ ಕೆಲವೊಂದು ಅಂಗಡಿಗಳು ಮುಚ್ಚಲ್ಪಟ್ಟಿದ್ದು, ಬಹುತೇಕ ಅಂಗಡಿಗಳು ಎಂದಿ ನಂತೆ ತೆರದುಕೊಂಡಿತ್ತು. ಪೊಲೀಸರು ಎಲ್ಲ ಕಡೆಗಳಲ್ಲಿ ಬಿಗು ಬಂದೋಬಸ್ತ್ ಮಾಡಿದ್ದರು.