ಮಂಗಳೂರು: ಅಂಗಡಿ ಮುಂಗಟ್ಟುಗಳು ಬಂದ್
ಮಂಗಳೂರು, ೆ.25: ಕರಾವಳಿ ಸೌಹಾರ್ದ ರ್ಯಾಲಿಯಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾಗವಹಿಸುವುದನ್ನು ವಿರೋಸಿ ಸಂಘಪರಿವಾರ ಕರೆ ನೀಡಿದ್ದ ಜಿಲ್ಲಾ ಬಂದ್ಗೆ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಿಡಿಗೇಡಿಗಳಿಂದ ಬಸ್ಗಳಿಗೆ ಕಲ್ಲೆಸೆತದಂತಹ ಪ್ರಕರಣಗಳನ್ನು ಹೊರತುಪಡಿಸಿ ಯಾವುದೇ ಅಹಿತಕರ ಘಟನೆಗಳು ಮಂಗಳೂರು ನಗರದಲ್ಲಿ ನಡೆದಿಲ್ಲ. ಉಳಿದಂತೆ ಬಹುತೇಕವಾಗಿ ಖಾಸಗಿ ಬಸ್ಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರೂ, ಖಾಸಗಿ ವಾಹನಗಳು, ಆಟೋ ರಿಕ್ಷಾಗಳು, ಕೆಎಸ್ಸಾರ್ಟಿಸಿ ಬಸ್ಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗದಂತೆ ಜಾಗರೂಕತೆ ವಹಿಸಲಾಗಿತ್ತು. ನಗರದಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಕೆಲವೆಡೆ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸುತ್ತಿದ್ದ ಪ್ರಕರಣಗಳೂ ನಡೆದಿವೆ.
ಖಾಸಗಿ ಬಸ್ಗಳು ಸಂಚಾರವನ್ನು ಸ್ಥಗಿತಗೊಳಿಸಿದ್ದ ಕಾರಣ ನಗರದ ಕೆಲವು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿತ್ತು. *ಪ್ರಥಮ ಪಿಯುಸಿ ಪರೀಕ್ಷೆ ನಿರಾತಂಕ: ಬಂದ್ ಹಿನ್ನೆಲೆಯಲ್ಲಿ ನಿಗದಿತ ಪ್ರಥಮ ಪಿಯುಸಿ ಪರೀಕ್ಷೆ ನಿರಾತಂಕವಾಗಿ ನಡೆಯಿತು. ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿಯಿಂದ ವಿಶೇಷ ಬಸ್ ಪಾಸ್ ವ್ಯವಸ್ಥೆಯ ಮೂಲಕ ನಗರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಯಿತು.