‘ಯು.ಟಿ.ಖಾದರ್ ಹೇಳಿಕೆ ಖಂಡನೀಯ’
ಉಳ್ಳಾಲ, ಫೆ.27: ಮಂಗಳೂರಿನಲ್ಲಿ ನಡೆದ ಸೌಹಾರ್ದ ರ್ಯಾಲಿಯಲ್ಲಿ ಕೇರಳ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ಭಾಗವಹಿಸುವುದನ್ನು ವಿರೋಧಿಸಿ ಸಂಘ ಪರಿವಾರ ಕರೆಕೊಟ್ಟ ಹರತಾಳಕ್ಕೆ ಪ್ರತಿಯಾಗಿ ಬಂದ್ಗೆ ಕರೆಕೊಟ್ಟವರನ್ನು ಚಪ್ಪಲಿಯಲ್ಲಿ ಹೊಡೆಯಬೇಕು ಎಂಬ ಮಾತನ್ನು ಸಚಿವ ಯು.ಟಿ. ಖಾದರ್ ಹೇಳಿರುವುದು ಖಂಡನೀಯ. ದ.ಕ. ಜಿಲ್ಲೆಯ ಸಚಿವರೊಬ್ಬರು ತನ್ನ ಸ್ಥಾನದ ಯೋಗ್ಯತೆಯ ಅರಿವಿಲ್ಲದೆ ಮಾತನಾಡಿರುವುದು ಅಪರಾಧ. ಆದ್ದರಿಂದ ಅವರು ಕೂಡಲೇ ಕ್ಷಮೆಯಾಚಿಸಬೇಕೆಂದು ಮಂಗಳೂರು ವಿಧಾನಸಭಾ ಕೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್ ಹೇಳಿದರು. ತೊಕ್ಕೊಟ್ಟುವಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ ಸಂದರ್ಭ ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಜಿ.ಪ್ರ.ಕಾರ್ಯದರ್ಶಿ ನಮಿತಾ ಶ್ಯಾಂ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರ.ಕಾ. ಹಾಜಿ ಡಾ.ಕೆ.ಎ. ಮುನೀರ್ ಬಾವಾ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮನೋಜ್ ಆಚಾರ್ಯ ನಾಣ್ಯ, ಬಿಜೆಪಿ ಕ್ಷೇತ್ರ ಯುವಮೋರ್ಚಾ ಅಧ್ಯಕ್ಷ ಸುಜಿತ್ ಮಾಡೂರು ಉಪಸ್ಥಿತರಿದ್ದರು.