ನಾಳೆ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಸುಳ್ಯ, ಮಾ.2: ದ.ಕ. ಜಿಲ್ಲಾ ಕಸಾಪ ಮತ್ತು ಸುಳ್ಯ ತಾಲೂಕು ಕಸಾಪ ಆಶ್ರಯದಲ್ಲಿ ಸುಳ್ಯ ತಾಲೂಕು 21ನೆ ಕನ್ನಡ ಸಾಹಿತ್ಯ ಸಮ್ಮೇಳನವು ಮಾ.4ರಂದು ಸಮ್ಮೇಳನಾಧ್ಯಕ್ಷ ಸಾಹಿತಿ ಲಕ್ಷ್ಮೀಶ ಚೊಕ್ಕಾಡಿ ಅಧ್ಯಕ್ಷತೆಯಲ್ಲಿ ಸುಳ್ಯದ ಯುವಜನ ಸಂಯುಕ್ತ ಮಂಡಳಿ ರಂಗಮಂದಿರದಲ್ಲಿ ನಡೆಯಲಿದೆ ಎಂದು ಕಸಾಪ ತಾಲೂಕು ಘಟಕಾಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
ಬೆಳಗ್ಗೆ 9ಕ್ಕೆ ಲಾಲ್ಬಹದ್ದೂರ್ ಶಾಸಿ ವೃತ್ತದಿಂದ ಕನ್ನಡ ಭುವನೇಶ್ವರಿ ಮೆರವಣಿಗೆ ನಡೆಯಲಿದ್ದು, ಸುಳ್ಯ ತಹಶೀಲ್ದಾರ್ ಎಂ.ಎಂ.ಗಣೇಶ್ ಚಾಲನೆ ನೀಡುವರು. ಪುಸ್ತಕ ಮತ್ತು ವಸ್ತು ಪ್ರದರ್ಶನವನ್ನು ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸುವರು. ಸಮಾರಂಭವನ್ನು ಶಾಸಕ ಎಸ್.ಅಂಗಾರ ಉದ್ಘಾಟಿಸುವರು. ಸ್ಮರಣ ಸಂಚಿಕೆಯನ್ನು ಎಪಿಎಂಸಿ ಅಧ್ಯಕ್ಷ ಜಾಕೆ ಮಾಧವ ಗೌಡ ಅನಾವರಣಗೊಳಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ಕುಮಾರ್ ಕಲ್ಕೂರ ಕನ್ನಡ ಕಸ್ತೂರಿ ಸನ್ಮಾನ ಮತ್ತು ಸಮಾರೋಪದ ಅಧ್ಯಕ್ಷತೆ ವಹಿಸಲಿದ್ದು, ವಿಮರ್ಶಕ ಎಸ್.ಆರ್.ವಿಜಯಶಂಕರ ಭಾಷಣ ಮಾಡುವರು.
ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ವಿ.ಹೇಮನಾಥ, ಕಸಾಪ ಗೌರವ ಕಾರ್ಯದರ್ಶಿ ಗಳಾದ ಚಂದ್ರಶೇಖರ ಪೇರಾಲು, ತೇಜಸ್ವಿ ಕಡಪಳ, ಕೋಶಾಕಾರಿ ದಯಾನಂದ ಆಳ್ವ ಉಪಸ್ಥಿತರಿದ್ದರು.