ಸುಬ್ರಹ್ಮಣ್ಯ: ಏಳು ಗ್ರಾಪಂಗಳ ಪ್ರಗತಿ ಪರಿಶೀಲನಾ ಸಭೆ
ಸುಬ್ರಹ್ಮಣ್ಯ, ಮಾ.19: ದ.ಕ. ಜಿಪಂ ಹಾಗೂ ಸುಳ್ಯ ತಾಪಂ ಸಹಯೋಗದಲ್ಲಿ ಗುತ್ತಿಗಾರು ಜಿಪಂ ಕ್ಷೇತ್ರ ವ್ಯಾಪ್ತಿಯ 7 ಗ್ರಾಮ ಪಂಚಾಯತ್ಗಳ ಪ್ರಗತಿ ಪರಿಶೀಲನಾ ಸಭೆಯು ಶನಿವಾರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ನ ಭಾರತ್ ನಿರ್ಮಾಣ್ ರಾಜೀವ ಗಾಂಧಿ ಸೇವಾಕೇಂದ್ರ ಸಭಾಭವನದಲ್ಲಿ ನಡೆಯಿತು. ಸಭೆಯನ್ನು ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು. ಜಿಪಂ ಸಿಇಒ ಡಾ.ಯಂ.ಆರ್.ರವಿ ಅಧ್ಯಕ್ಷತೆ ವಹಿಸಿದ್ದರು.
ಸುಬ್ರಹ್ಮಣ್ಯ, ಗುತ್ತಿಗಾರು, ದೇವಚಳ್ಳ, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಮಡಪ್ಪಾಡಿ, ಬಳ್ಪ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು ಸಮಸ್ಯೆಗಳನ್ನು ವಿವರಿಸಿದರು. ಅಲ್ಲದೆ ತಮ್ಮ ಪ್ರದೇಶದಲ್ಲಿ ಆದ ಅಭಿವೃದ್ಧಿ ಕಾರ್ಯಗಳ ಚಿತ್ರಣ ನೀಡಿದರು.
ಜಿಪಂ ಸದಸ್ಯೆ ಆಶಾ ತಿಮ್ಮಪ್ಪ, ಉಪಕಾರ್ಯದರ್ಶಿ ಎನ್.ಆರ್.ಉಮೇಶ್, ತಾಪಂ ಕಾರ್ಯನಿರ್ವಣಾಧಿಕಾರಿ ಮಧುಕುಮಾರ್, ಜಿಪಂ ಯೋಜನಾಧಿಕಾರಿ ಲೋಕೇಶ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸುಧಾಕರ್, ಸಿಡಿಪಿಒ ಸಹಾಯಕ ನಿರ್ದೇಶಕ ಸುಂದರ ಪೂಜಾರಿ, ತಹಶೀಲ್ದಾರ್ ಗಣೇಶ್, ಸುಬ್ರಹ್ಮಣ್ಯ ಗ್ರಾಪಂ ಅಧ್ಯಕ್ಷೆ ಸುಶೀಲಾ ಹೊಸಮನೆ, ತಾಪಂ ಸದಸ್ಯರಾದ ಅಶೋಕ್ ನೆಕ್ರಾಜೆ, ಯಶೋದಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಪಂ ಸದಸ್ಯರು, ತಾಪಂ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. ಪಿಡಿಒ ಶೇಖರ್ ಯು.ಡಿ. ಸ್ವಾಗತಿಸಿದರು. ಸುಧಾಕರ್ ಪ್ರಸ್ತಾಪಿಸಿದರು. ಮೋನಪ್ಪ ಡಿ. ವಂದಿಸಿದರು. ಕೈಗಾರಿಕಾ ವಿಸ್ತರಣಾಧಿಕಾರಿ ವೀರಪ್ಪಗೌಡ ಕಾರ್ಯಕ್ರಮ ನಿರೂಪಿಸಿದರು.