ಕೈಕಂಬದಲ್ಲಿ ಧಾರ್ಮಿಕ ಸಮಾವೇಶ
ಬಿ.ಸಿ.ರೋಡ್, ಮಾ.19: ಸೌತ್ ಕರ್ನಾಟಕ ಸಲಫಿ ಮೂವ್ಮೆಂಟ್ ಹಮ್ಮಿಕೊಂಡಿರುವ ಕುರ್ಆನ್ ಸಂದೇಶ ಪ್ರಚಾರ ಅಭಿಯಾನದ ಅಂಗವಾಗಿ, ಬಿ.ಸಿ.ರೋಡ್ ಸಮೀಪದ ಕೈಕಂಬದ ಪೂಂಜಾ ಮೈದಾನದಲ್ಲಿ ಶನಿವಾರ ಧಾರ್ಮಿಕ ಸಮಾವೇಶ ಜರಗಿತು.
ಖ್ಯಾತ ವಾಗ್ಮಿ ಅಲಿ ಉಮರ್ ಮುಖ್ಯ ಭಾಷಣ ಮಾಡಿದರು. ಹಿರಿಯ ವಿದ್ವಾಂಸ ಚುಯ್ಯೆಲಿ ಅಬ್ದುಲ್ಲಾ ಮುಸ್ಲಿಯಾರ್ ‘ಲಾಇಲಾಹ ಇಲ್ಲಲ್ಲಾಹ್’ ಎಂಬ ವಿಷಯವಾಗಿ ಪ್ರವಚನ ನೀಡಿದರು.
ಸಲಫಿ ಮೂವ್ಮೆಂಟ್ನ ಕೇಂದ್ರ ಸಮಿತಿಯ ಅಧ್ಯಕ್ಷ ಯು.ಎನ್.ಅಬ್ದುರ್ರಝಾಕ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಜೆಡಿಎಸ್ ಮುಖಂಡ ಪಿ.ಎಂ.ರಹೀಮ್ ಬಿ.ಸಿ.ರೋಡ್, ಸಾಮಾಜಿಕ ಮುಂದಾಳು ಅಬ್ದುಲ್ ಜಬ್ಬಾರ್ ಮಾರಿಪಳ್ಳ ಮುಂತಾದವರು ಮುಖ್ಯ ಅತಿಥಿಗಳಾಗಿದ್ದರು.
ಎಸ್.ಕೆ.ಎಸ್.ಎಂ. ಯೂತ್ವಿಂಗ್ ಅಧ್ಯಕ್ಷ ಶಿಹಾಬ್ ತಲಪಾಡಿ ಸ್ವಾಗತಿಸಿ, ವಂದಿಸಿದರು.
Next Story