ತಲಪಾಡಿ ಶಾಲಾ ನೂತನ ಕಟ್ಟಡ ಉದ್ಘಾಟನೆ
ಉಳ್ಳಾಲ, ಮಾ.19: ತಲಪಾಡಿಯ ಸರಕಾರಿ ಪ್ರೌಢಶಾಲೆಯಲ್ಲಿ ಅಭಿಯಾನ ಯೋಜನೆಯಡಿ ಮಂಜೂರಾದ ಶಾಲಾ ನೂತನ ಕಟ್ಟಡದ ಉದ್ಘಾಟನೆಯನ್ನು ಆಹಾರ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು.
ಸಂಸದ ನಳಿನ್ಕುಮಾರ್ ಕಟೀಲು, ಜಿಪಂ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಜಿಪಂ ಸದಸ್ಯೆ ರಶೀದಾ ಬಾನು, ತಾಪಂ ಸದಸ್ಯ ಮುಹಮ್ಮದ್ ಸಿದ್ದೀಕ್, ತಲಪಾಡಿ ಗ್ರಾಪಂ ಅಧ್ಯಕ್ಷ ಸುರೇಶ್ ಆಳ್ವ, ಉಪಾಧ್ಯಕ್ಷ ಜಯಲಕ್ಷ್ಮೀ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯ ಜಿಲ್ಲಾ ಉಪ ಯೋಜನಾಧಿಕಾರಿ ಲೋಕೇಶ್ ಸಿ., ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ., ಎಸ್ಡಿಎಂಸಿ ಕಾರ್ಯಾಧ್ಯಕ್ಷ ಎಸ್.ಅಬ್ದುಲ್ ಖಾದರ್, ಸದಸ್ಯರಾದ ಇಸ್ಮಾಯೀಲ್ ನಾಗತೋಟ, ಇಸ್ಮಾಯೀಲ್ ತಲಪಾಡಿ, ಖಾದರ್ ತಲಪಾಡಿ ಮತ್ತು ಗಡಿನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಅಬೂಬಕರ್ ಸಿದ್ದೀಕ್ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಶರ್ಮಿಳಾ ಸ್ವಾಗತಿಸಿದರು, ಜ್ಯೋತಿ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು. ಶರ್ಮಿಳಾ ಶೆಟ್ಟಿ ವಂದಿಸಿದರು.
Next Story