ರಿಯಾಝ್ ಮುಸ್ಲಿಯಾರ್ ಮನೆಗೆ ಎಸ್ಸೆಸ್ಸೆಫ್, ಎಸ್ವೈಎಸ್ ನಾಯಕರ ಬೇಟಿ
ಕಾಸರಗೋಡು, ಮಾ.23ಳ ಕಾಸರಗೋಡಿನ ಚೂರಿ ಎಂಬಲ್ಲಿನ ಮಸೀದಿಯಲ್ಲಿ ಭೀಕರವಾಗಿ ಹತ್ಯೆಗೈಯಲ್ಪಟ್ಟ ಕೊಟ್ಟಮುಡಿ ಆಝಾದ್ ನಗರ ನಿವಾಸಿ ರಿಯಾಝ್ ಮುಸ್ಲಿಯಾರ್ ಮನೆ, ಹಾಗೂ ಅವರ ಪತ್ನಿಯ ಮನೆಗೆ ಎಸ್ಸೆಸ್ಸೆಫ್, ಎಸ್ವೈಎಸ್ ರಾಷ್ಟ್ರ ರಾಜ್ಯ ನಾಯಕರು ಭೇಟಿಯಾಗಿ ಸಾಂತ್ವನ ತಿಳಿಸಿ ಆರ್ಥಿಕ ನೆರವು ನೀಡಿದರು.
ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗು ಕರ್ನಾಟಕ ಸರಕಾರ ಹಜ್ ಸಮಿತಿ ಸದಸ್ಯ ಕೆ.ಎಂ ಸಿದ್ದೀಕ್ ಮೋಂಟುಗೋಳಿ, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ ರಿಲೀಫ್ ಸರ್ವಿಸ್ ನಿರ್ದೇಶಕ ರಶೀದ್ ಹಾಜಿ ಪಾಂಡೇಶ್ವರ, ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ ರಿಲೀಫ್ ಸರ್ವಿಸ್ ಚೇರಮಾನ್ ಅಲ್ತಾಫ್ ಕುಂಪಲ, ಎಸ್ಸೆಸ್ಸೆಫ್ ದ.ಕ ಜಿಲ್ಲಾ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಶಮೀರ್ ಸುಳ್ಯ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ತ್ವಾಹಾ ಕೋಟೆಪುರ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಮಿತಿ ಸದಸ್ಯ ಸಯೀದ್ ಮಂಚಿಲ ಹಾಗು ಇತರ ನಾಯಕರು ಉಪಸ್ಥಿತರಿದ್ದರು.