ನಾಳೆ ಮಹಾವೀರ ಜಯಂತಿ
ಉಡುಪಿ, ಎ.8: ಜಿಲ್ಲಾಡಳಿತ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಶ್ರೀಮಹಾವೀರ ಜಯಂತಿ ಆಚರಣೆ ಕಾರ್ಯಕ್ರಮವು ಎ.10ರಂದು ಬೆಳಗ್ಗೆ 10:30ಕ್ಕೆ ಕುತ್ಪಾಡಿ ಎಸ್ಡಿಎಂ ಆಯುರ್ವೇದಿಕ್ ಕಾಲೇಜಿನ ಶ್ರೀಧರ್ಮಸ್ಥಳ ಮಾತೃಶ್ರೀ ರತ್ನಮ್ಮ ಮೆಮೋರಿಯಲ್ ಗೋಲ್ಡನ್ ಜ್ಯುಬಿಲಿ ಹಾಲ್ನಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮ ಉದ್ಘಾಟಿಸ ಲಿದ್ದಾರೆ. ಉಜಿರೆ ಎಸ್ಡಿಎಂ ಪಿಜಿ ಸೆಂಟರ್ನ ಸಮಾಜಕಾರ್ಯ ವಿಭಾಗದ ಸಹ ಪ್ರಾಧ್ಯಾಪಕ ಸುವೀರ್ ಜೈನ್ ಮಹಾವೀರರ ಕುರಿತು ಉಪನ್ಯಾಸ ನೀಡಲಿದ್ದಾರೆ.
Next Story