‘ಮಲಬಾರ್ ಗೋಲ್ಡ್’ನಿಂದ ಮನೆ ನಿರ್ಮಿಸಲು 25.49 ಲಕ್ಷ ರೂ. ಆರ್ಥಿಕ ನೆರವು
ಮಂಗಳೂರು, ಎ.15: ಮಲಬಾರ್ ಗೋಲ್ಡ್ ಆ್ಯಂಡ್ ಡೈಮೆಂಡ್ಸ್ ಸಂಸ್ಥೆಯ ಹೌಸಿಂಗ್ ಚಾರಿಟಿ ವಿಭಾಗದ ವತಿಯಿಂದ ಮನೆ ನಿರ್ಮಾಣಕ್ಕಾಗಿ 51 ಫಲಾನುಭವಿಗಳಗೆ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ರೂ 25,49,000 ಮೊತ್ತದ ಹಣಕಾಸಿನ ನೆರವು ವಿತರಿಸಲಾಯಿತು.
ನಗರದ ಫಳ್ನಿರ್ನಲ್ಲಿರುವ ಸಂಸ್ಥೆಯ ಶೋರೂಂನಲ್ಲಿ ನಡೆದ ಸಮಾರಂಭದಲ್ಲಿ ಅತಿಥಿಗಳ ಸಮ್ಮುಖದಲ್ಲಿ ಫಲಾನುಭವಿಗಳಿಗೆ ಹಣಕಾಸು ನೆರವು ನೀಡಲಾಯಿತು.
ಸಮಾರಂಭದ ವೇದಿಕೆಯಲ್ಲಿ ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, ಶಾಸಕ ಜೆ.ಆರ್.ಲೋಬೊ, ಮಂಗಳೂರು ಮನಪಾ ಸದಸ್ಯ ಅಬ್ದುಲ್ ರವೂಫ್, ಅಕ್ಷರ ಸಂತ ಹರೇಕಳ ಹಾಜಬ್ಬ, ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಿರ್ದೇಶಕ ಕರುಣಾಕರ, ವಿಭಾಗದ ಮುಖ್ಯಸ್ಥ ಮತ್ತು ನಿರ್ದೇಶಕ ಝುಬೈರ್ ಎಂ.ಪಿ., ಜಿಲ್ಲಾ ಪಂಚಾಯತ್ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಾಹುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.
ಇಬ್ರಾಹೀಂ ಬಾತಿಶ್ ವರದಿ ವಾಚಿಸಿದರು. ಶರತ್ ಸ್ವಾಗತಿಸಿದರು. ಹಫೀಝ್ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದಲ್ಲಿ ಭಾಗವಹಿಸದ ಅತಿಥಿಗಳು ಫಲಾನುಭವಿಗಳಿಗೆ ಆರ್ಥಿಕ ನೆರವಿನ ಚೆಕ್ನ್ನು ಸಾಂಕೇತಿಕವಾಗಿ ಹಸ್ತಾಂತರಿಸಿದರು.