ಎ.29: ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘದ ದಶಮಾನೋತ್ಸವ
ಮಂಗಳೂರು, ಎ.20: ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘದ ದಶಮಾನೋತ್ಸವ ಸಮಾವೇಶ ಮತ್ತು ಡಾ. ಅಂಬೇಡ್ಕರ್ರ126ನೆ ಜನ್ಮದಿನೋತ್ಸವ ಎ.29ರಂದು ಬೆಳಗ್ಗೆ 10:30ಕ್ಕೆ ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ವಕ್ತಾರ ರಾಮ್ಕುಮಾರ್ ಪಿ. ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮೈಸೂರು ಭಾವೈಕ್ಯ ಕೇಂದ್ರದ ಶ್ರೀ ಬಸವಧ್ಯಾನ ಮಂದಿರದ ಬಸವಲಿಂಗ ಮೂರ್ತಿ ಸ್ವಾಮೀಜಿ ಆರ್ಶೀವಚನ ನೀಡಲಿದ್ದಾರೆ. ಆ ದಿನ ಬೆಳಗ್ಗೆ ಜ್ಯೋತಿ ವೃತ್ತದಿಂದ ಮೈದಾನದವರೆಗೆ ಮೆರವಣಿಗೆ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ಶೇಖರ್ ಬಳ್ಳಾಲ್ಬಾಗ್, ಅಧ್ಯಕ್ಷ ಮೋಹನ್ ನೆಲ್ಲಿಗುಂಡಿ, ಪ್ರಧಾನ ಕಾರ್ಯದರ್ಶಿ ಸಂಜೀವ ಕೋಟ್ಯಾನ್, ಜಯೇಂದ್ರ ಕೋಟ್ಯಾನ್ ಉಪಸ್ಥಿತರಿದ್ದರು.
Next Story