ಯುನಿವೆಫ್ ಕರ್ನಾಟಕದ ಸದಸ್ಯತ್ವ ಅಭಿಯಾನ ಸಮಾರೋಪ
ಮಂಗಳೂರು, ಎ.24: ಯುನಿವೆಫ್ ಕರ್ನಾಟಕ ಕಳೆದ ಒಂದು ತಿಂಗಳಿಂದ ನವಯುಗದ ಸಾರಥಿ ಎಂಬ ಕೇಂದ್ರೀಯ ವಿಷಯದಲ್ಲಿ ಸದಸ್ಯತ್ವ ಅಭಿಯಾನವನ್ನು ಕೈಗೆತ್ತಿಕೊಂಡಿತ್ತು. ಅಭಿಯಾನದ ಸಮಾರೋಪವು ನಗರದ ಜಮೀಯ್ಯತುಲ್ ಫಲಾಹ್ ಹಾಲ್ ನಲ್ಲಿ ಇತ್ತೀಚೆಗೆ ಜರಗಿತು.
ಯುನಿವೆಫ್ ಕರ್ನಾಟಕ ರಾಜ್ಯಾಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಮಾತನಾಡಿ, ದೇಶದ ಸ್ಥಿತಿಗತಿಗಳು ಯಾವ ರೀತಿಯಾಗಿದ್ದರೂ ಯುವಕರು ನಿರಾಶರಾಗಬೇಕಿಲ್ಲ. ಇತಿಹಾಸದಿಂದ ಪಾಠ ಕಲಿತು ಉತ್ತಮ ಭವಿಷ್ಯವನ್ನು ರೂಪೀಕರಿಸಲು ಸಿದ್ಧರಾಗಬೇಕಿದೆ ಎಂದು ಕರೆ ನೀಡಿದರು.
ಮಂಗಳೂರು ಶಾಖಾಧ್ಯಕ್ಷ ನೌಫಲ್ ಹಸನ್ ಕಿರಾಅತ್ ಪಠಿಸಿದರು. ಜಿಲ್ಲಾಧ್ಯಕ್ಷ ಸೈಫುದ್ದೀನ್ ಕುದ್ರೋಳಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಅಭಿಯಾನ ಸಂಚಾಲಕ ಅಬ್ದುಲ್ಲಾ ಪಾರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಸಂಚಾಲಕ ಅಡ್ವೋಕೇಟ್ ಸಿರಾಜುದ್ದೀನ್ ವಂದಿಸಿದರು.
ಈ ಅಭಿಯಾನಾದ್ಯಂತ ಸುಮಾರು 50 ಯುವಕರು ಸಂಘಟನೆಯ ಸದಸ್ಯತ್ವ ಸ್ವೀಕರಿಸಿದರು.
Next Story