ನೇಣು ಬಿಗಿದು ಯುವಕ ಆತ್ಮಹತ್ಯೆ
ಬಂಟ್ವಾಳ, ಮೇ 11: ಯುವಕನೊಬ್ಬ ಮನೆಯ ಹಿಂದಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನರಿಕೊಂಬು ಗ್ರಾಮದ ಮೊಗರ್ನಾಡು ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಶೇಖರ ಮೂಲ್ಯ ಎಂಬವರ ಮಗ ದೀಪಕ್(24) ಆತ್ಮಹತ್ಯೆಗೆ ಶರಣಾದ ಯುವಕ. ಈತ ಮಂಗಳೂರಿನಲ್ಲಿ ಮರದ ಕೆಲಸಕ್ಕೆಂದು ಪ್ರತಿದಿನ ತೆರಳುತ್ತಿದ್ದು, ವಾರದಿಂದ ಖಿನ್ನತೆಯಿಂದ ಬಳಲುತ್ತಿದ್ದ. ಬುಧವಾರ ರಜೆ ಎಂದು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದ ದೀಪಕ್ ಮನೆ ಮಂದಿ ಹೊರಹೋದ ಬಳಿಕಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಬಂಟ್ವಾಳ ನರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story