ಇಂದು ಕೌಶಲ್ಯ ತರಬೇತಿ ಮಾಹಿತಿ ಮೇಳ
ಮಂಗಳೂರು, ಮೇ 16: ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ರಾಜೀವ್ ಗಾಂಧಿ ಚೈತನ್ಯ ಯೋಜನೆ ಮತ್ತು ದ.ಕ. ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಗ್ರಾಮೀಣ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಅಭ್ಯರ್ಥಿಗಳ ಒಗ್ಗೂಡಿಸುವಿಕೆ, ಆಯ್ಕೆ ಮತ್ತು ಉದ್ಯೋಗ ಕಲ್ಪಿಸಲು ಜಿಲ್ಲಾ ಮಟ್ಟದ ಕೌಶಲ್ಯ ತರಬೇತಿ ಮಾಹಿತಿ ಮೇಳವು ಮೇ 17ರಂದು ಬೆಳಗ್ಗೆ 10:30ಕ್ಕೆ ದ.ಕ. ಜಿಪಂ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟನೆೆ ತಿಳಿಸಿದೆ.
Next Story