ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ನಾಲ್ವರ ರಕ್ಷಣೆ
ಉಳ್ಳಾಲ, ಮೇ 23: ವಿಹಾರಕ್ಕೆಂದು ಬಂದಿದ್ದ ವೇಳೆ ಸಮುದ್ರಪಾಲಾಗುತ್ತಿದ್ದ ನಾಲ್ವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಮೊಗವೀರಪಟ್ನದಲ್ಲಿ ನಡೆದಿದೆ.
ಉಳ್ಳಾಲ ಮೊಗವೀರಪಟ್ನದ ಸಮುದ್ರವಿಹಾರಕ್ಕೆಂದು ನಾಲ್ವರು ಆಗಮಿಸಿದ್ದು, ಈ ಸಂದರ್ಭ ಅಲೆಗಳ ರಭಸಕ್ಕೆ ಸಿಲುಕಿ ಸಮುದ್ರಪಾಲಾಗುತ್ತಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯ ಮೊಗವೀರರು ಅವರನ್ನು ರಕ್ಷಿಸಿದ್ದಾರೆ.
Next Story