ನಾಳೆ ಭಾರತೀಯ ಸಂಸ್ಕೃತಿ ಉತ್ಸವ
ಉಡುಪಿ, ಮೇ 26: ಲಯನ್ಸ್ ಕ್ಲಬ್ ಉಡುಪಿ ಚೇತನ ಇದರ ಐದನೆ ವರ್ಷದ ಸಂಭ್ರಮಾ ಚರಣೆಯ ಪ್ರಯುಕ್ತ ಮಂಗಳೂರು ಕನ್ನಡ ಜಾಗೃತ ಬಳಗದ ಸಹಕಾರದೊಂದಿಗೆ ‘ಭಾರತೀಯ ಸಂಸ್ಕೃತಿ ಉತ್ಸವ’ವನ್ನು ಮೇ 28 ರಂದು ಮಣಿಪಾಲದ ಆರ್ಎಸ್ಬಿ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಬೆಳಗ್ಗೆ 10:30ಕ್ಕೆ ಲಯನ್ಸ್ ಜಿಲ್ಲಾ ದ್ವಿತೀಯ ಉಪಗವರ್ನರ್ ವಿ.ಜೆ. ಶೆಟ್ಟಿ ಉತ್ಸವವನ್ನು ಉದ್ಘಾಟಿಸಲಿರುವರು. ಬಳಿಕ ವಿಚಾರಗೋಷ್ಠಿಗಳು, ಭಾರತೀಯ ಸಂಸ್ಕೃತಿ ಮತ್ತು ಮಹಿಳೆ ಎಂಬ ವಿಷಯದ ಕುರಿತು ಚರ್ಚೆ, ಗೀತಾ ಭಾರತಿ ಕಾರ್ಯಕ್ರಮ ಜರಗಲಿದೆ. ಸಂಜೆ 4ಕ್ಕೆ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭ ಕೆರೆಮನೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಪ್ರದರ್ಶನ ಜರಗಲಿದೆ ಎಂದು ಸಂಸ್ಥೆ ಅಧ್ಯಕ್ಷ ಶಂಕರ್ ನಾಯಕ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
ಸ್ವಾಗತ ಸಮಿತಿ ಅಧ್ಯಕ್ಷ ರತ್ನಾಕರ್ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಕಾರಿ ಜಗದೀಶ್ ಆಚಾರ್ಯ ಉಪಸ್ಥಿತರಿದ್ದರು.
Next Story