ಕುಂಡಡ್ಕ-ಚೆನ್ನಾವರ ಸೇತುವೆ ಫಿಲ್ಲರ್ ಬಿರುಕು: ಶಾಸಕ ಎಸ್. ಅಂಗಾರರಿಂದ ಪರಿಶೀಲನೆ
ಪುತ್ತೂರು, ಮೇ 27: ಚೆನ್ನಾವರ-ಕುಂಡಡ್ಕ ಸಂಪರ್ಕ ರಸ್ತೆಯಲ್ಲಿ ಗೌರಿ ಹೊಳೆಗೆ ನಿರ್ಮಿಸಿರುವ ಸೇತುವೆಯ ಪಿಲ್ಲರ್ನಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಶನಿವಾರ ಶಾಸಕ ಎಸ್. ಅಂಗಾರ ಸೇತುವೆಯ ಸ್ಥಿತಿಗತಿಯನ್ನು ಪರಿಶೀಲಿಸಿದರು.
ಸೇತವೆಯ ಮುಖ್ಯ ಫಿಲ್ಲರ್ನ ಕೆಳಭಾಗದಲ್ಲಿ ಬಿರುಕು ಬಿಟ್ಟಿರುವ ಸ್ಥಳವನ್ನು ಪರಿಶೀಲಿಸಿದ ಅವರು, ತುರ್ತು ಕಾಮಗಾರಿಗೆ ಸ್ಪಂದಿಸುವ ಭರವಸೆ ನೀಡಿದರು. ಸಂಬಂಧಪಟ್ಟ ಇಲಾಖೆಯ ಎಂಜಿನಿಯರ್ಗೆ ಈ ಬಗ್ಗೆ ಸೂಚನೆ ನೀಡುವುದಾಗಿ ಶಾಸಕರು ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಪರಮೇಶ್ವರ್ ನಾಯ್ಕ, ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಉಮೇಶ್ ಕೆ.ಎಂ.ಬಿ, ಚನಿಯ ಕುಂಡಡ್ಕ, ಎಪಿಎಂಸಿ ಸದಸ್ಯ ನವೀನ್ ಸಾರಕೆರೆ, ಬೆಳ್ಳಾರೆ ಸಿ.ಎ ಬ್ಯಾಂಕ್ ನಿರ್ದೇಶಕ ಪದ್ಮನಾಭ ಶೆಟ್ಟಿ ಪೆರುವಾಜೆ, ಸುಳ್ಯ ಜ್ಯೋತಿ ಇಂಡಸ್ಟ್ರಿಯಲ್ನ ಜಗನ್ನಾಥ ರೈ, ಮುಕ್ಕೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ಸಂತೋಷ್ ಕುಮಾರ್ ರೈ ಕಾಪು, ಬಿಜೆಪಿ ಮುಖಂಡ ಕುಶಾಲಪ್ಪ ಪೆರುವಾಜೆ, ಚೆನ್ನಾವರ ಮಸೀದಿ ಆಡಳಿತ ಮಂಡಳಿ ಅಧ್ಯಕ್ಷ ಉಸ್ಮಾನ್ ಚೆನ್ನಾವರ, ಮುಕ್ಕೂರು ಅಂಗನವಾಡಿ ಮೇಲುಸ್ತುವಾರಿ ಸಮಿತಿಯ ಹೊನ್ನಪ್ಪ ಗೌಡ ಚಾಮುಂಡಿಮೂಲೆ, ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಮಚಂದ್ರ ಚೆನ್ನಾವರ, ಜ್ಯೋತಿ ಯುವಕ ಮಂಡಲ ಅಧ್ಯಕ್ಷ ಸತ್ಯಪ್ರಸಾದ್ ಕಂಡಿಪ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.