Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಲೇಜು ನಿರ್ಮಿಸುವುದು ನನ್ನ ಕನಸು:...

ಕಾಲೇಜು ನಿರ್ಮಿಸುವುದು ನನ್ನ ಕನಸು: ಹರೇಕಳ ಹಾಜಬ್ಬ

ವಾರ್ತಾಭಾರತಿವಾರ್ತಾಭಾರತಿ27 May 2017 10:56 PM IST
share
ಕಾಲೇಜು ನಿರ್ಮಿಸುವುದು ನನ್ನ ಕನಸು: ಹರೇಕಳ ಹಾಜಬ್ಬ

ಉಡುಪಿ, ಮೇ 27: ಮುಂದೆ ಕಾಲೇಜು ನಿರ್ಮಿಸುವುದು ನನ್ನ ಕನಸಾಗಿದ್ದು, ಇದಕ್ಕೆ ಅನುಮತಿ ನೀಡುವಂತೆ ಈಗಾಗಲೇ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರಿಗೆ ಮನವಿ ಸಲ್ಲಿಸಿದ್ದೇನೆ. ಅದೇ ರೀತಿ ಸಚಿವ ಯು.ಟಿ.ಖಾದರ್ ಕೂಡ ಇದಕ್ಕೆ ಸ್ಪಂದಿಸಿದ್ದಾರೆ ಎಂದು ಅಕ್ಷರ ಸಂತ ಹರೇಕಳ ಹಾಜಬ್ಬ ಹೇಳಿದ್ದಾರೆ.

ಉಡುಪಿಯ ಬಿಯಿಂಗ್ ಸೋಶಿಯಲ್ ವತಿಯಿಂದ ತ್ರಿಶಾ ಕ್ಲಾಸೆಸ್ ಹಾಗೂ ಎಂಜಿಎಂ ಕಾಲೇಜಿನ ಸಹಯೋಗದೊಂದಿಗೆ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ‘ಹೆಜ್ಜೆ ಗುರುತು’ ಸಾಧಕರ ಯಶೋಗಾಥೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.
 

1978ರಿಂದ ಹಂಪನಕಟ್ಟೆ ಬಸ್ ನಿಲ್ದಾಣದಲ್ಲಿ ಗೋವಾ ಪಣಜಿ ಬಸ್‌ಗಳಲ್ಲಿ ಬರುವ ಪ್ರಯಾಣಿಕರಿಗೆ ಕಿತ್ತಲೆ ಹಣ್ಣು ಮಾರಾಟ ಮಾಡುತ್ತಿರುವಾಗ ವಿದೇಶಿ ಜೋಡಿಯ ಇಂಗ್ಲಿಷ್ ಭಾಷೆಯ ಪ್ರಶ್ನೆಯಿಂದಾಗಿ ಮುಜುಗರಕ್ಕೆ ಒಳಗಾಗಿ ನಮ್ಮ ಊರಿನ ಮಕ್ಕಳು ಈ ರೀತಿಯ ಮುಜುಗರ ಅನುಭವಿಸಬಾರದೆಂದು ಸಂಕಲ್ಪ ಮಾಡಿ, ಶಾಲೆ ನಿರ್ಮಿಸುವ ಕನಸು ಕಂಡೆನು ಎಂದರು.
 

ನನ್ನನು ಸಮಾಜ, ಮಾಧ್ಯಮ ಗುರುತಿಸಿದೆ. ಇದರಿಂದ ನನಗೆ ಸಾಕಷ್ಟು ಪ್ರಶಸ್ತಿ ಗಳು ದೊರೆತಿವೆ. ಅವುಗಳ ಎಲ್ಲ ಮೊತ್ತವನ್ನು ಶಾಲೆಯ ಅಭಿವೃದ್ಧಿಗಾಗಿಯೇ ವಿನಿಯೋಗಿಸಿದ್ದೇನೆ. ಸದ್ಯ ನಮ್ಮ ಶಾಲೆಯಲ್ಲಿ 192 ಮಕ್ಕಳು ಕಲಿಯುತ್ತಿದ್ದಾರೆ. ಇಂಗ್ಲಿಷ್ ವ್ಯಾಮೋಹದಿಂದಾಗಿ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಕಡಿಮೆ ಯಾಗುತ್ತಿದೆ. ಎಲ್ಲರು ಸೇರಿ ನನ್ನ ಶಾಲೆಯನ್ನು ಉಳಿಸಿಕೊಡಿ ಎಂದು ಅವರು ಮನವಿ ಮಾಡಿದರು.

ನನಗೆ ಇಬ್ಬರು ಹೆಣ್ಣು ಮಕ್ಕಳು. ದೊಡ್ಡವಳಿಗೆ 23ವರ್ಷ ವಯಸ್ಸಾಗಿದೆ. ಈಗ ಎಲ್ಲೆಡೆ ವರದಕ್ಷಿಣೆಯದ್ದೆ ಸಮಸ್ಯೆ. ಉತ್ತಮ ವರ ಸಿಗದೆ ಇನ್ನು ಮದುವೆಯಾಗಿಲ್ಲ. ಆಕೆಗೆ ಮದುವೆ ಮಾಡುವುದು ನನ್ನ ಕೊನೆಯ ಆಸೆ ಎಂದು ಅವರು ತಿಳಿಸಿ ದರು. ಈ ಸಂದರ್ಭದಲ್ಲಿ ಸತೀಶ್ ಪೂಜಾರಿ ಎಂಬವರು ಹಾಜಬ್ಬರ ಮಗಳ ಮದುವೆಗೆ 10ಸಾವಿರ ರೂ. ನೀಡಿ ಮಾನವೀಯತೆ ಮೆರೆದರು.

ಹಾಜಬ್ಬರ ಯಶೋಗಾಥೆ ಧಾರವಾಡ, ಮಂಗಳೂರು ಹಾಗೂ ಕುವೆಂಪು ವಿವಿ ಯಲ್ಲಿ ಪಠ್ಯವಾಗಿದೆ. ಮುಂದೆ ತುಳು ಪಠ್ಯದಲ್ಲಿ ಇವರ ಯಶೋಗಾಥೆ ಯನ್ನು ಸೇರಿಸಲು ಇಲಾಖೆ ಒಪ್ಪಿಗೆ ನೀಡಿದೆ. ಇವರು ಈಗಲೂ ಶಾಲೆಗೆ ಹೋಗಿ ಪ್ರತಿದಿನ ಕಸ ಗುಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾರ್ಯಕ್ರಮ ನಡೆಸಿ ಕೊಟ್ಟ ಅವಿನಾಶ್ ಕಾಮತ್ ತಿಳಿಸಿದರು.

ಕಾರ್ಯಕ್ರಮಕ್ಕೆ ಯಕ್ಷಗಾನ ಕೇಂದ್ರದ ಗುರು ಬನ್ನಂಜೆ ಸಂಜೀವ ಸುವರ್ಣ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಮಂಗಳೂರು ವಿವಿ ಸೆನೆಟ್ ಸದಸ್ಯ ಅಮೃತ್ ಶೆಣೈ ಮಾತನಾಡಿದರು. ರವಿರಾಜ್ ಎಚ್.ಪಿ. ಸ್ವಾಗತಿಸಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ನಂದಾ ವಂದಿಸಿದರು. ಜ್ಯೋತಿ ಕಾರ್ಯಕ್ರಮ ನಿರೂ ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X