ತ್ರೈಮಾಸಿಕ ಅಂಚೆ ಅದಾಲತ್
ಉಡುಪಿ, ಜೂ.3: ಉಡುಪಿ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಜೂ.19 ರಂದು ಅಪರಾಹ್ನ 3ಕ್ಕೆ ತ್ರೈಮಾಸಿಕ ಅಂಚೆ ಅದಾಲತ್ನ್ನು ನಡೆಸಲಾಗುವುದು ಎಂದು ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಜೂ.15ರೊಳಗೆ ಅಂಚೆ ಅಧೀಕ್ಷಕರ ಕಚೇರಿಗೆ ಕಳುಹಿಸಬಹುದು ಹಾಗೂ ಅಂಚೆ ಅದಾಲತ್ ನಡೆಯುವ ದಿನದಂದು ಹಾಜರಿದ್ದು, ಚರ್ಚಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಬಹುದು ಎಂದು ಭಾರತೀಯ ಅಂಚೆ ಇಲಾಖೆ ಪ್ರಕಟಣೆ ತಿಳಿಸಿದೆ.
Next Story