ಜೂ.23 ಕೃಷಿ ಸಚಿವರು ಉಡುಪಿಗೆ
ಉಡುಪಿ, ಜೂ.21: ರಾಜ್ಯ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಜೂ.23 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಗ್ಗೆ 7:00 ಗಂಟೆಗೆ ಉಡುಪಿ ಪ್ರವಾಸಿ ಮಂದಿರಕ್ಕೆ ಆಗಮಿಸುವ ಅವರು 10:00 ಗಂಟೆಗೆ ಬ್ರಹ್ಮಾವರದಲ್ಲಿ ಕೃಷಿ ಹಾಗೂ ತೊಟಗಾರಿಕೆ ವಿಶ್ವವಿದ್ಯಾನಿಲಯದ ನೂತನ ಕಟ್ಟಡಗಳು ಹಾಗೂ ಕೃಷಿ ಇಲಾಖೆಯ ನೂತನ ರೈತ ಸಂಪರ್ಕ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಕಟ್ಟಡ ಉದ್ಘಾಟನೆ: ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿವಿ, ಬ್ರಹ್ಮಾವರದ ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಬೆಂಗಳೂರು ಇವರ ವತಿಯಿಂದ ನಿರ್ಮಾಣಗೊಂಡಿರುವ ಡಿಪ್ಲೋಮಾ ಕೃಷಿ ಮಹಾ ವಿದ್ಯಾಲಯ ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗಳ ಉದ್ಘಾಟನಾ ಸಮಾರಂಭ ಜೂ.23ರ ಶುಕ್ರವಾರ ಬೆಳಗ್ಗೆ 10:00ಕ್ಕೆ ಡಿಪ್ಲೋಮಾ ಕೃಷಿ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಕಟ್ಟಡಗಳನ್ನು ಕೃಷಿ ಸಚಿವ ಕೃಷ್ಣ ಭೈರೇಗೌಡ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ವಹಿಸು ವರು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.