ಸರಕಾರಿ ಮಹಿಳಾ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ
ಉಡುಪಿ, ಜೂ.23: ರಾಜ್ಯ ಸರಕಾರದಿಂದ ಮಂಜೂರಾದ 1.7ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಅಜ್ಜರಕಾಡು ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸ್ನಾತಕೋತ್ತರ ವಿಭಾಗದ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಶುಕ್ರವಾರ ಉದ್ಘಾಟಿಸಿದರು.
ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಕೇಂದ್ರ, ರಾಜ್ಯ ಸರಕಾರ ಹಾಗೂ ಯುಜಿಸಿಯಿಂದ ಒಟ್ಟು ಐದು ಕೋಟಿ ರೂ. ಅನುದಾನವನ್ನು ತರಿಸಿ ಈ ಕಾಲೇಜಿನ ಕಟ್ಟಡ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಕ್ಕಾಗಿ ವ್ಯಯಿಸ ಲಾಗಿದೆ. ಇಲ್ಲಿಗೆ ಅಗತ್ಯವಾಗಿರುವ ಸಭಾಂಗಣ ಮತ್ತು ಗ್ರಂಥಾಲಯ ನಿರ್ಮಾಣಕ್ಕೆ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದರೆ ಇಡೀ ಸಮಾಜ, ದೇಶಕ್ಕೆ ಶಕ್ತಿ ಬರುತ್ತದೆ ಎಂದು ಸಚಿವರು ಹೇಳಿದರು.
Next Story