Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೌದ್ಧ ಧರ್ಮ ಕಾಲದಲ್ಲಿ ದಾರ್ಶನಿಕ...

ಬೌದ್ಧ ಧರ್ಮ ಕಾಲದಲ್ಲಿ ದಾರ್ಶನಿಕ ಸಂಘರ್ಷ: ಪೇಜಾವರ ಶ್ರೀ

ವಾರ್ತಾಭಾರತಿವಾರ್ತಾಭಾರತಿ30 Jun 2017 7:42 PM IST
share
ಬೌದ್ಧ ಧರ್ಮ ಕಾಲದಲ್ಲಿ ದಾರ್ಶನಿಕ ಸಂಘರ್ಷ: ಪೇಜಾವರ ಶ್ರೀ

ಉಡುಪಿ, ಜೂ.30: ಬೌದ್ಧ ಧರ್ಮದ ಕಾಲಘಟ್ಟ ದಾರ್ಶನಿಕ ಸಂಘರ್ಷದ ಕಾಲವಾಗಿತ್ತು. ಅಂದು ಮೀಮಾಂಸಕರ ವೈದಿಕ ದರ್ಶನ, ಶಂಕಾರಾಚಾರ್ಯರ ವೈದಿಕ ದರ್ಶನ, ಬೌದ್ಧ ಹಾಗೂ ಜೈನ ದರ್ಶನಗಳ ನಡುವೆ ತಿಕ್ಕಾಟ ಸಂಘರ್ಷಗಳು ನಡೆದು ದೊಡ್ಡ ಕೋಲಾಹಲವೇ ಈ ದೇಶದಲ್ಲಿ ಉಂಟಾಗಿತ್ತು. ಇದ ರಿಂದ ಒಂದರ ಪ್ರಭಾವ ಇನ್ನೊಂದರ ಮೇಲೆ ಬೀರಿತ್ತು ಎಂದು ಪರ್ಯಾಯ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಬೆಂಗಳೂರು ಪೂರ್ಣಪ್ರಜ್ಞ ಸಂಶೋಧನ ಮಂದಿರ ಮತ್ತು ಕಲಬುರಗಿ ಪಾಲಿ ಇನ್‌ಸ್ಟಿಟ್ಯೂಟ್‌ನ ಜಂಟಿ ಆಶ್ರಯದಲ್ಲಿ ಉಡುಪಿ ಶ್ರೀಕೃಷ್ಣ ಮಠದ ಕನಕ ಮಂಟಪದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಬೌದ್ಧದರ್ಶನದ ವಿವಿಧ ಆಯಾಮಗಳ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಬೌದ್ಧ ಧರ್ಮವು ಜಗತ್ತಿನಾದ್ಯಂತ ಹೆಚ್ಚು ಪ್ರಚಾರ ಹೊಂದಿರುವ ಧರ್ಮವಾಗಿದೆ. ಬೌದ್ಧ ಧರ್ಮದ ಎರಡು ಮುಖಗಳಲ್ಲಿ ಒಂದು ಮಾನವೀಯ ಸಂದೇಶ ಮತ್ತೊಂದು ದಾರ್ಶನಿಕ ಸ್ವರೂಪ. ಇದರಲ್ಲಿ ದಾರ್ಶನಿಕ ಸ್ವರೂಪದ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಇಂದು ಜಗತ್ತಿನಲ್ಲಿ ಬೌದ್ಧಧರ್ಮದ ದಾರ್ಶನಿಕ ಮುಖ ಯಾವುದು ಎಂಬುದರ ಬಗ್ಗೆ ಅರಿತುಕೊಂಡು ವಿಮರ್ಶೆ ಮಾಡಬೇಕಾಗಿದೆ ಎಂದರು.

ಬೌದ್ಧ ಧರ್ಮ ಅಂದರೆ ಏನು, ಅದರ ದರ್ಶನ, ತತ್ವಜ್ಞಾನಗಳ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಜಗತ್ತಿನ ಎಲ್ಲ ಕಡೆ ಇರುವ ಬೌದ್ಧ ಧರ್ಮ ಒಂದೇ ರೀತಿ ಇದೆಯೆ, ಅದರ ನಡುವೆ ಅಂತರ ಇದೆಯೇ, ವಿವಿಧ ದೇಶಗಳ ಬೌದ್ಧಧರ್ಮಗಳ ದರ್ಶನ ಯಾವುದು, ಬೌದ್ಧಧರ್ಮವನ್ನು ತಿಳಿದುಕೊಳ್ಳಲು ಯಾವ ಧರ್ಮ ಓದಬೇಕು ಎಂಬುದರ ಬಗ್ಗೆ ತಿಳಿದುಕೊಳ್ಳಬೇಕಾಗಿದೆ ಎಂದು ಸ್ವಾಮೀಜಿ ತಿಳಿಸಿದರು.

ಬೌದ್ಧ ಧರ್ಮದ ಯಾನಗಗಳ ತಾತ್ವಿಕ ಬೇಧ ಏನು, ಇದರ ನಡುವಿನ ಭಿನ್ನತೆ ಏನು. ಇದರಲ್ಲಿ ಇಂದು ಯಾವುದು ಪ್ರಚಲಿತವಾಗಿದೆ ಎಂಬುದು ಗೊತ್ತಿಲ್ಲ. ಬೌದ್ಧ ಧರ್ಮ ಸ್ವೀಕರಿಸಿದವರಿಗೆ ಬೌದ್ಧ ತತ್ವಜ್ಞಾನ ಏನು ಎಂಬುದು ತಿಳಿದಿಲ್ಲ. ಆದುದರಿಂದ ಬೌದ್ಧ ಧರ್ಮದ ತಾತ್ವಿಕ ಸ್ವರೂಪ ಏನು ಎಂಬುದು ಅರಿಯು ವುದು ಮುಖ್ಯ ಎಂದು ಅವರು ಹೇಳಿದರು.

ಕಲಬುರಗಿ ಪಾಲಿ ಇನ್‌ಸ್ಟಿಟ್ಯೂಟ್‌ನ ಗೌರವ ನಿರ್ದೇಶಕ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ ದಿಕ್ಸೂಚಿ ಭಾಷಣ ಮಾಡಿ, ಬುದ್ಧ ತನ್ನ ತತ್ವ ಚಿಂತನೆಯನ್ನು ಮಧ್ಯಮ ಮಾರ್ಗದ ಮೂಲಕ ಹೇಳುತ್ತಾನೆ. ಇದೇ ಮಾರ್ಗದ ಮೂಲಕ ಬುದ್ಧ ಧರ್ಮವನ್ನು ಭಾರತ ಸೇರಿದಂತೆ ಇಡೀ ಜಗತ್ತಿಗೆ ವಿಸ್ತರಿಸಿದನು. ಬುದ್ಧ ಮಾಂಸಹಾರ ಸೇವನೆ ಮಾಡುತ್ತಿದ್ದ ಎಂಬುದಕ್ಕೆ ಸ್ಪಷ್ಟತೆ ಇಲ್ಲ. ಇದಕ್ಕೆ ನಿಖರವಾದ ಆಧಾರ ಸಿಕ್ಕಿಲ್ಲ ಎಂದರು.

ಪೇಜಾವರ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕಲಬುರಗಿ ಪಾಲಿ ಇನ್‌ಸ್ಟಿಟ್ಯೂಟ್‌ನ ಅಧ್ಯಕ್ಷ ರಾಹುಲ್ ಖರ್ಗೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸ್ವಾಮೀಜಿಗಳು ವಿವಿಧ ಕೃತಿಗಳನ್ನು ಬಿಡುಗಡೆಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X